ADVERTISEMENT

ಜಾನಪದ ಕಲಾವಿದರ ಗಣತಿ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2014, 19:30 IST
Last Updated 22 ಮಾರ್ಚ್ 2014, 19:30 IST

ಧಾರವಾಡ: ‘ರಾಜ್ಯದಲ್ಲಿ ಶೀಘ್ರದಲ್ಲೇ ಜಾನಪದ ಕಲಾವಿದರ ಗಣತಿ ಪ್ರಕ್ರಿಯೆಗೆ ಚಾಲನೆ ನೀಡುತ್ತೇವೆ’ ಎಂದು ಕರ್ನಾಟಕ ರಾಜ್ಯ ಜಾನಪದ ಅಕಾಡೆಮಿ ಅಧ್ಯಕ್ಷ ಪಿಚ್ಚಳ್ಳಿ ಶ್ರೀನಿವಾಸ್‌ ಹೇಳಿದರು.

ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಂವಾದದಲ್ಲಿ ಮಾತನಾಡಿದ ಅವರು, ಇದುವರೆಗೂ ಜಾನಪದ ಕಲಾವಿದರ ಪಟ್ಟಿ ಮಾಡಿಲ್ಲ. ಜಾನಪದ ವಿವಿಯೂ ಈ ಕೆಲಸ ಮಾಡಿಲ್ಲ ಎಂದರು.

‘ಎಷ್ಟೋ ಬಾರಿ ಕಲಾವಿದರಿಗೆ ಸೇರಬೇಕಾದ ಹಣ ಮಧ್ಯವರ್ತಿಗಳ ಜೇಬಿಗೆ ಹೋಗು­ವುದನ್ನು ಗಮನಿಸಿದ್ದೇವೆ. ಇದನ್ನು ತಡೆಯಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೇರವಾಗಿ ಕಲಾವಿದರ ಬ್ಯಾಂಕ್‌ ಖಾತೆಗೆ ಹಣ ಜಮಾ ಮಾಡುವ ಬಗ್ಗೆಯೂ ಚಿಂತನೆ ನಡೆಸಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.