ಮಂಗಳೂರು: ಸಚಿವ ಕೆ.ಜೆ.ಜಾರ್ಜ್ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಬಿಜೆಪಿ ಅವರ ರಾಜೀನಾಮೆ ಕೇಳುತ್ತಿದೆ ಎಂದು ಅರಣ್ಯ ಸಚಿವ ಬಿ.ರಮಾನಾಥ ರೈ ಆರೋಪಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿವೈಎಸ್ಪಿ ಗಣಪತಿ ಪ್ರಕರಣದಲ್ಲಿ ಸಿಐಡಿ ತನಿಖೆ ನಡೆದಾಗ ಜಾರ್ಜ್ ರಾಜೀನಾಮೆ ನೀಡಿದ್ದರು. ಈಗ ಸಿಬಿಐ ತನಿಖೆ ಕಾರಣಕ್ಕೆ ಮತ್ತೆ ರಾಜೀನಾಮೆ ಕೇಳುವ ನೈತಿಕತೆ ಬಿಜೆಪಿಯ ಮುಖಂಡರಿಗೆ ಇಲ್ಲ ಎಂದು ಹೇಳಿದರು.
ಗಣಿ ಹಗರಣದಲ್ಲಿ ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಅವರನ್ನು ಸಿಬಿಐ ರಕ್ಷಿಸುತ್ತಿದೆ. ಇದಕ್ಕೆ ಕೇಂದ್ರ ಸರ್ಕಾರ ಸಿಬಿಐ ಮೇಲೆ ಪ್ರಭಾವ ಬೀರಿರುವುದು ಕಾರಣ ಎಂದು ಆರೋಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.