ADVERTISEMENT

ಜಾವಡೇಕರ್ ಸಮ್ಮುಖದಲ್ಲಿ ಪ್ರಣಾಳಿಕೆ ಸಮಿತಿ ಸಭೆ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2017, 19:30 IST
Last Updated 16 ನವೆಂಬರ್ 2017, 19:30 IST
ಜಾವಡೇಕರ್ ಸಮ್ಮುಖದಲ್ಲಿ ಪ್ರಣಾಳಿಕೆ ಸಮಿತಿ ಸಭೆ
ಜಾವಡೇಕರ್ ಸಮ್ಮುಖದಲ್ಲಿ ಪ್ರಣಾಳಿಕೆ ಸಮಿತಿ ಸಭೆ   

ಬೆಳಗಾವಿ: ರಾಜ್ಯ ಚುನಾವಣಾ ಉಸ್ತುವಾರಿ ಹಾಗೂ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್‌ ಸಮ್ಮುಖದಲ್ಲಿ ಬಿಜೆಪಿ ಪ್ರಣಾಳಿಕೆ ಸಮಿತಿ ಸಭೆ ಭಾನುವಾರ(ನ.19) ಬೆಂಗಳೂರಿನಲ್ಲಿ ನಡೆಯಲಿದೆ.

ಪ್ರಣಾಳಿಕೆ ಸಿದ್ಧಪಡಿಸಲು ಶಾಸಕ ಎಸ್‌. ಸುರೇಶ್‌ ಕುಮಾರ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಈಗಾಗಲೇ ಮೂರು ಬಾರಿ ಸಭೆ ಸೇರಿದ್ದ ಸಮಿತಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದೆ.

ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಜವಾಬ್ದಾರಿ ಹೊತ್ತಿರುವ ಜಾವಡೇಕರ್, ಸಮಿತಿ ಸದಸ್ಯರ ಅಭಿಪ್ರಾಯ ಆಲಿಸಲು ನಿರ್ಧರಿಸಿದ್ದಾರೆ. ಅಂದಿನ ಸಭೆಯಲ್ಲಿ ಅವರೂ ಸಲಹೆಗಳನ್ನು ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.