ADVERTISEMENT

ಜಿಗ್ನೇಶ್ ಮೇವಾನಿಗೆ ‘ಹರಳಯ್ಯ ಯುವ ಪ್ರಶಸ್ತಿ’ ಪ್ರದಾನ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2018, 7:14 IST
Last Updated 6 ಏಪ್ರಿಲ್ 2018, 7:14 IST
ಮಹಾ ಶಿವಶರಣ ಹರಳಯ್ಯ ಗುರುಪೀಠದ ಬಸವ ಹರಳಯ್ಯ ಸ್ವಾಮೀಜಿ ಜಿಗ್ನೇಶ್‌ ಮೇವಾನಿ ಅವರಿಗೆ ಶಿವಶರಣ ‘ಹರಳಯ್ಯ ಯುವ ಪ್ರಶಸ್ತಿ’ ನೀಡಿ ಗೌರವಿಸಿದರು. –ಪ್ರಜಾವಾಣಿ ಚಿತ್ರ
ಮಹಾ ಶಿವಶರಣ ಹರಳಯ್ಯ ಗುರುಪೀಠದ ಬಸವ ಹರಳಯ್ಯ ಸ್ವಾಮೀಜಿ ಜಿಗ್ನೇಶ್‌ ಮೇವಾನಿ ಅವರಿಗೆ ಶಿವಶರಣ ‘ಹರಳಯ್ಯ ಯುವ ಪ್ರಶಸ್ತಿ’ ನೀಡಿ ಗೌರವಿಸಿದರು. –ಪ್ರಜಾವಾಣಿ ಚಿತ್ರ   

ಚಿತ್ರದುರ್ಗ: ಪ್ರಗತಿಪರ ಚಿಂತಕ, ಗುಜರಾತಿನ ವಡಗಾಂ ಶಾಸಕ ಜಿಗ್ನೇಶ್‌ ಮೇವಾನಿ ಅವರಿಗೆ ಮಹಾ ಶಿವಶರಣ ಹರಳಯ್ಯ ಗುರುಪೀಠದ ಬಸವ ಹರಳಯ್ಯ ಸ್ವಾಮೀಜಿ ಅವರು ಶಿವಶರಣ ‘ಹರಳಯ್ಯ ಯುವ ಪ್ರಶಸ್ತಿ’ ನೀಡಿ ಗೌರವಿಸಿದರು.

ಇಲ್ಲಿನ ಕೆಇಬಿ ಸಮುದಾಯ ಭವನದಲ್ಲಿ ಶುಕ್ರವಾರ ನಡೆದ ಮಹಾ ಶಿವಶರಣ ಹರಳಯ್ಯ ಜಯಂತ್ಯುತ್ಸವದಲ್ಲಿ ಇದೇ ಮೊದಲ ಬಾರಿಗೆ ಪ್ರಶಸ್ತಿ ಜತೆಗೆ ಫಲಕ ನೀಡಿ ಸನ್ಮಾನಿಸಲಾಯಿತು.

ಚಿತ್ರ ನಟ ಪ್ರಕಾಶ ರೈ ಸೇರಿದಂತೆ ರಾಜ್ಯದ ವಿವಿಧ ಮಠಾಧೀಶರು, ಧಾರ್ಮಿಕ ಗುರುಗಳು ಕಾರ್ಯಕ್ರಮದಲ್ಲಿ ಇದ್ದರು.

ADVERTISEMENT

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.