ಬೆಂಗಳೂರು: ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್ಯು) ಕನ್ನಡ ಅಧ್ಯಯನ ಪೀಠಕ್ಕೆ ರಾಜ್ಯ ಸರ್ಕಾರ ₹ 5 ಕೋಟಿ ಬಿಡುಗಡೆ ಮಾಡಿದೆ.
ಪೀಠ ಎರಡು ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರದಿಂದ ಪ್ರತಿ ವರ್ಷ ಅನುದಾನ ನೀಡಲಾಗುತ್ತಿತ್ತು. ಅದರ ಬದಲು ₹ 5 ಕೋಟಿಯನ್ನು ಬ್ಯಾಂಕಿನಲ್ಲಿ ನಿಶ್ಚಿತ ಠೇವಣಿ ಇಟ್ಟು ಅದರಿಂದ ವರ್ಷಕ್ಕೆ ಬರುವ ₹ 40 ಲಕ್ಷ ಬಡ್ಡಿಯಲ್ಲಿ ಪೀಠದ ಕಾರ್ಯಚಟುವಟಿಕೆ ಮುಂದುವರಿಸಲು ತಿಳಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎನ್.ಆರ್. ವಿಶುಕುಮಾರ್ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.