ADVERTISEMENT

ಜೆಡಿಎಸ್‌ನತ್ತ ರವೀಂದ್ರ ಶ್ರೀಕಂಠಯ್ಯ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2017, 19:30 IST
Last Updated 6 ನವೆಂಬರ್ 2017, 19:30 IST
ಜೆಡಿಎಸ್‌ನತ್ತ ರವೀಂದ್ರ ಶ್ರೀಕಂಠಯ್ಯ
ಜೆಡಿಎಸ್‌ನತ್ತ ರವೀಂದ್ರ ಶ್ರೀಕಂಠಯ್ಯ   

ಮಂಡ್ಯ: ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರವು ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಹಾಲಿ ಶಾಸಕ ಜೆಡಿಎಸ್‌ನಿಂದ ಬಂಡಾಯ ಎದ್ದಿರುವ ರಮೇಶ್‌ ಬಂಡಿ ಸಿದ್ದೇಗೌಡ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡುವುದು ಖಾತರಿಯಾಗುತ್ತಿದ್ದಂತೆ, ಜೆಡಿಎಸ್ ವಲಯದಲ್ಲಿ ಚುರುಕಿನ ವಿದ್ಯಮಾನಗಳು ನಡೆದಿವೆ.

ಕಾಂಗ್ರೆಸ್‌ ತೊರೆದಿರುವ ಮುಖಂಡ ರವೀಂದ್ರ ಶ್ರೀಕಂಠಯ್ಯ ಅವರು ಜೆಡಿಎಸ್ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಎಸ್‌.ಎಂ.ಕೃಷ್ಣ ಅವರು ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರಿದಾಗ ಅವರ ಜತೆ ಪಕ್ಷಕ್ಕೆ ರಾಜೀನಾಮೆ ನೀಡಿ ತಟಸ್ಥರಾಗಿ ಉಳಿದಿದ್ದ ರವೀಂದ್ರ ಅವರ ನಿವಾಸಕ್ಕೆ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿರುವುದು ಸಾಕಷ್ಟು ಕುತೂಹಲಕ್ಕೆ ಎಡೆ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT