ADVERTISEMENT

ಜೆಡಿಎಸ್‌ಗೆ ರಾಜುಗೌಡ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2013, 19:59 IST
Last Updated 4 ಏಪ್ರಿಲ್ 2013, 19:59 IST

ಬೆಂಗಳೂರು: ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಾಜಿ ಸಚಿವ ರಾಜುಗೌಡ ಶುಕ್ರವಾರ ಬೆಳಿಗ್ಗೆ 11ಕ್ಕೆ ಇಲ್ಲಿ ಜೆಡಿಎಸ್‌ಗೆ ಸೇರಲಿದ್ದಾರೆ.

ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಗುರುವಾರ ರಾತ್ರಿ ಚರ್ಚೆ ನಡೆಸಿದ ರಾಜುಗೌಡ, ಜೆಡಿಎಸ್ ಸೇರುವ ತೀರ್ಮಾನ ತೆಗೆದುಕೊಂಡರು. ಸುರಪುರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ ಎಂದು ಗೊತ್ತಾಗಿದೆ. ಅವರು ಈ ಮುನ್ನ ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದರು. ಆದರೆ, ಕಾಂಗ್ರೆಸ್ ಟಿಕೆಟ್ ದೊರೆಯುವುದಿಲ್ಲ ಎಂದು ಖಚಿತವಾಗುತ್ತಿದ್ದಂತೆಯೇ ಜೆಡಿಎಸ್ ಸೇರುವ ತೀರ್ಮಾನ ತೆಗೆದುಕೊಂಡರು ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.