ADVERTISEMENT

ಜೆಡಿಯು ಪಕ್ಷದಿಂದ ಸ್ಪರ್ಧೆ: ಟಪಾಲ್‌ ಗಣೇಶ್

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2018, 19:30 IST
Last Updated 1 ಮಾರ್ಚ್ 2018, 19:30 IST

ಬಳ್ಳಾರಿ: ಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ಜನತಾದಳ (ಯು) ಅಭ್ಯರ್ಥಿಯಾಗಿ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಗಣಿ ಉದ್ಯಮಿ ಟಪಾಲ್‌ ಗಣೇಶ್‌ ತಿಳಿಸಿದರು.

‘ನಾನು ಪಕ್ಷೇತರನಾಗಿ ಸ್ಪರ್ಧಿಸಲಿರುವ ಕುರಿತು ಮಾಹಿತಿ ಪಡೆದ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಹಿಮ ಪಟೇಲ್ ತಮ್ಮ ಪಕ್ಷದಿಂದಲೇ ಸ್ಪರ್ಧಿಸುವಂತೆ ಆಹ್ವಾನ ನೀಡಿದರು’ ಎಂದು ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಬಿಜೆಪಿ ಅಭ್ಯರ್ಥಿಯೆಂದು ಹೇಳಲಾಗುತ್ತಿರುವ ಜಿ.ಸೋಮಶೇಖರ ರೆಡ್ಡಿ ಹಣ ಹಂಚದೆ ಚುನಾವಣೆಯಲ್ಲಿ ಸ್ಪರ್ಧಿಸಲಿ’ ಎಂದು ಸವಾಲು ಹಾಕಿದ ಗಣೇಶ್‌, ‘ಆಗ ನಾನು ಅವರಿಗಿಂತ ಹೆಚ್ಚು ಮತ ಗಳಿಸುವೆ’ ಎಂದು ಪ್ರತಿಪಾದಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.