ಶಿರಸಿ (ಉ.ಕ.ಜಿಲ್ಲೆ): ರಾಜ್ಯದ ಪ್ರತಿಷ್ಠಿತ ಉತ್ಸವಗಳಲ್ಲಿ ಒಂದಾದ ಕದಂಬೋತ್ಸವವು ತಾಲ್ಲೂಕಿನ ಐತಿಹಾಸಿಕ ಕ್ಷೇತ್ರ ಬನವಾಸಿಯಲ್ಲಿ ಜ.18 ಹಾಗೂ 19ರಂದು ನಡೆಯಲಿದೆ.
ಎರಡು ವರ್ಷಗಳ ನಂತರ ಈ ವರ್ಷ ಉತ್ಸವ ಆಚರಿಸಲು ಸರ್ಕಾರ ದಿನಾಂಕ ನಿಗದಿಪಡಿಸಿದೆ. ಜಿಲ್ಲೆಯ ಕಲಾವಿದರಿಗೆ ಪ್ರಾತಿನಿಧ್ಯ ನೀಡುವ ಜೊತೆಗೆ ಹೊರ ರಾಜ್ಯದ ಕಲಾವಿದರನ್ನೂ ಆಹ್ವಾನಿಸಲು ತೀರ್ಮಾನಿಸಲಾಗಿದೆ.
ಶಾಸಕ ಶಿವರಾಮ ಹೆಬ್ಬಾರ ಅವರು ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಉತ್ಸವದ ದಿನಾಂಕ ಪ್ರಕಟಿಸಿದರು. ಕದಂಬೋತ್ಸವಕ್ಕೆ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು, ವಿಜೃಂಭಣೆಯಿಂದ ಆಚರಿಸಲಾಗುವುದು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.