ADVERTISEMENT

ಡಮರುಗ ಬಾರಿಸುತ್ತಿರುವ ಬಿಜೆಪಿ: ಪರಮೇಶ್ವರ್

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2011, 19:30 IST
Last Updated 10 ಅಕ್ಟೋಬರ್ 2011, 19:30 IST

ಬೆಂಗಳೂರು: ರಾಜ್ಯ ಎದುರಿಸುತ್ತಿರುವ ವಿದ್ಯುತ್ ಕೊರತೆಯಿಂದ ರೈತರು, ಜನಸಾಮಾನ್ಯರ ದಿನನಿತ್ಯದ ಚಟುವಟಿಕೆಗಳ ಮೇಲೆ ಆಗುತ್ತಿರುವ ದುಷ್ಪರಿಣಾಮ ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

`ಕಳೆದ 60 ವರ್ಷಗಳಲ್ಲಿ ಸಾಧಿಸಲು ಸಾಧ್ಯವಾಗದೆ ಇರುವುದನ್ನು ಮೂರು ವರ್ಷಗಳಲ್ಲಿ ಸಾಧಿಸಲಾಗಿದೆ ಎಂದು ಬಿಜೆಪಿ ಡಮರುಗ ಬಾರಿಸುತ್ತಿರುವುದು ಜನತೆಗೆ ಮಾಡುವ ಮೋಸವಾಗಿದೆ. ವಿದ್ಯುತ್ ಸಮಸ್ಯೆಗೆ ಕ್ರಮ ತೆಗೆದುಕೊಳ್ಳದಿದ್ದರೆ ಕಾಂಗ್ರೆಸ್ ಹೋರಾಟ ನಡೆಸಲಿದೆ ಎಂದು ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT