ಮೂಡುಬಿದಿರೆ: ಕಾಂತಾವರ ಕನ್ನಡ ಸಂಘವು ಸಾಂಸ್ಕೃತಿಕ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ನಾಡಿಗೆ ವಿಶೇಷ ಕೊಡುಗೆ ನೀಡಿದ ಸಾಧಕರಿಗೆ ನೀಡುವ ವಾರ್ಷಿಕ ಗೌರವ ಪ್ರಶಸ್ತಿಗೆ ಈ ಬಾರಿ ಉಡುಪಿಯ ಪ್ರಸಾದ್ ನೇತ್ರಾಲಯದ ಡಾ.ಕೃಷ್ಣ ಪ್ರಸಾದ್ ಕೂಡ್ಲು ಅವರನ್ನು ಆಯ್ಕೆ ಮಾಡಲಾಗಿದೆ.
ನೇತ್ರ ಚಿಕಿತ್ಸಾ ಕ್ಷೇತ್ರದಲ್ಲಿ ಈ ಹಿಂದೆ ಡಾ.ಎಂ.ಸಿ.ಮೋದಿ ಅವರು ಮಾಡಿದ ಸಾಧನೆಯ ಹತ್ತಿರಕ್ಕೆ ಬರುತ್ತಿರುವ ಡಾ. ಕೃಷ್ಣಪ್ರಸಾದ್ ಕೂಡ್ಲು ಅವರಿಗೆ ಈ ಪ್ರಶಸ್ತಿ ನೀಡಲು ನಿಶ್ಚಯಿಸಲಾಗಿದೆ ಎಂದು ಸಂಘದ ಕಾರ್ಯಾಧ್ಯಕ್ಷ ಡಾ.ನಾ.ಮೊಗಸಾಲೆ ತಿಳಿಸಿದ್ದಾರೆ.
ನವೆಂಬರ್ 2ರಂದು ಕಾಂತಾವರ ಕನ್ನಡ ಭವನದಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಂಸದ ಎಂ.ವೀರಪ್ಪ ಮೊಯಿಲಿ ಅಧ್ಯಕ್ಷತೆ ವಹಿಸಲಿದ್ದು, ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ ಪಾಲ್ಗೊಳ್ಳುವರು. ಪ್ರಶಸ್ತಿಯು ತಾಮ್ರಪತ್ರ ಹಾಗೂ ಸನ್ಮಾನವನ್ನು ಒಳಗೊಂಡಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸದಾನಂದ ನಾರಾವಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.