ADVERTISEMENT

ಡಾ.ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವ: ಪ್ರಕಾಶ್‌ ರೈಗೆ ಅದ್ಧೂರಿ ಸ್ವಾಗತ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2018, 13:53 IST
Last Updated 13 ಏಪ್ರಿಲ್ 2018, 13:53 IST
ಡಾ.ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವ: ಪ್ರಕಾಶ್‌ ರೈಗೆ ಅದ್ಧೂರಿ ಸ್ವಾಗತ
ಡಾ.ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವ: ಪ್ರಕಾಶ್‌ ರೈಗೆ ಅದ್ಧೂರಿ ಸ್ವಾಗತ   

ಕಲಬುರ್ಗಿ: ಇಲ್ಲಿನ ಜಗತ್ ವೃತ್ತದಲ್ಲಿ ಹಮ್ಮಿಕೊಂಡಿರುವ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಚಲನಚಿತ್ರ ನಟ ಪ್ರಕಾಶ್ ರೈ ಭಾಗವಹಿಸಿದ್ದಾರೆ.

ಬೆಂಗಳೂರಿನಿಂದ ವಿಮಾನದ ಮೂಲಕ ಹೈದರಾಬಾದ್‌ಗೆ ಬಂದ ಅವರು, ಅಲ್ಲಿಂದ ಹೆಲಿಕಾಪ್ಟರ್‌ ಮೂಲಕ ನಗರಕ್ಕೆ ಬಂದರು.

ದಲಿತ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಅವರನ್ನು ಅದ್ಧೂರಿಯಾಗಿ ಬರಮಾಡಿಕೊಂಡರು. ಭಾರಿ ಬಿಗಿ ಭಧ್ರತೆ ಏರ್ಪಡಿಸಲಾಗಿತ್ತು.

ADVERTISEMENT

ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಹಮ್ಮಿಕೊಂಡಿದ್ದ ಮೆರವಣಿಗೆಗೆ ಜಿಲ್ಲಾ ಪೊಲೀಸರು ನಿರಾಕರಿಸಿದ್ದರಿಂದ ಪ್ರಕಾಶ್ ರೈ ಅವರು ಕಾರಿನಲ್ಲಿ ಬಂದರು.

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.