ಬೆಂಗಳೂರು: ‘ಕಾರಾಗೃಹದಲ್ಲಿ ಬಂದಿಯಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ. ಶಶಿಕಲಾ ಅವರಿಗೆ ವಿಶೇಷ ಆತಿಥ್ಯ ವ್ಯವಸ್ಥೆ ಮಾಡಲು ಕಾರಾಗೃಹಗಳ ಇಲಾಖೆ ಡಿಜಿಪಿ ಎಚ್.ಎನ್. ಸತ್ಯನಾರಾಯಣರಾವ್ ಅವರು ₹ 2 ಕೋಟಿ ಲಂಚ ಪಡೆದಿದ್ದಾರೆ ಎಂಬ ಮಾತಿದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು’ ಎಂದು ಪತ್ರ ಬರೆದಿದ್ದ ಇಲಾಖೆಯ ಡಿಐಜಿ ಡಿ. ರೂಪಾ ಅವರು ಈ ಸಂಬಂಧ ಎರಡನೇ ವರದಿಯನ್ನು ಡಿಜಿಪಿ ಅವರಿಗೆ ಶನಿವಾರ ಸಲ್ಲಿಸಿದ್ದಾರೆ.
ಜೈಲಿಗೆ ಡಿ. ರೂಪಾ ಹಾಗೂ ಡಿಜಿಪಿ ಎಚ್.ಎನ್. ಸತ್ಯನಾರಾಯಣರಾವ್ ಅವರು ಪ್ರತ್ಯೇಕವಾಗಿ ಭೇಟಿ ನೀಡಿದ್ದು, ಕೆಲವು ಮಾಹಿತಿ ಪಡೆದುಕೊಂಡಿದ್ದಾರೆ.
ರೂಪಾ ಅವರು ಸಲ್ಲಿಸಿರುವ ಎರಡನೇ ವರದಿಯಲ್ಲಿಯೂ ಶಶಿಕಲಾಗೆ ವಿಶೇಷ ಸೌಕರ್ಯ ಒದಗಿಸಿದ್ದಕ್ಕೆ ಲಂಚ ಪಡೆದಿರುವ ಕುರಿತು ಉಲ್ಲೇಖಿಸಿದ್ದಾರೆ.
ಎರಡನೇ ವರದಿಯ ಜತೆ ವಿಶೇಷ ಸೌಲಭ್ಯ ಕಲ್ಪಿಸಿರುವ ವಿಡಿಯೊಗಳನ್ನು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇವನ್ನೂ ಓದಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.