ADVERTISEMENT

ಡಿ.ಬಿ.ರಾಮಸ್ವಾಮಿ- ನಿಧನ ವಾರ್ತೆ

​ಪ್ರಜಾವಾಣಿ ವಾರ್ತೆ
Published 16 ಜನವರಿ 2012, 19:30 IST
Last Updated 16 ಜನವರಿ 2012, 19:30 IST

ಡಿ.ಬಿ.ರಾಮಸ್ವಾಮಿ
ಚಿಕ್ಕಮಗಳೂರು:
ಸಂಸದ ಡಿ.ಬಿ.ಚಂದ್ರೇಗೌಡ ಅವರ ಅಣ್ಣ ದಾರದಹಳ್ಳಿಯ ಡಿ.ಬಿ.ರಾಮಸ್ವಾಮಿ (73) ಭಾನುವಾರ ರಾತ್ರಿ ನಿಧನರಾದರು.

ದಾರದಹಳ್ಳಿಯಲ್ಲಿ ಅಂತ್ಯಕ್ರಿಯೆ ಸೋಮವಾರ ನಡೆಯಿತು. ಸಕಲೇಶಪುರ ಜೇನು ಸಹಕಾರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಇವರು ಪತ್ನಿ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ.  ಇವರು, ದಾರದಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ ಅಧ್ಯಕ್ಷ ಹಾಗೂ ಮೂಡಿಗೆರೆ ಹೌಸಿಂಗ್ ಸೊಸೈಟಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದರು. 

ಗ್ರಾಮದ ದೇವಾಲಯಗಳ ಸಮಿತಿ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕಿ ಮೋಟಮ್ಮ, ಕೇಂದ್ರದ ಮಾಜಿ ಸಚಿವೆ ತಾರಾದೇವಿ ಸಿದ್ಧಾರ್ಥ, ವಿಧಾನಪರಿಷತ್ ಮಾಜಿ ಸದಸ್ಯ ಡಿ.ಎಂ.ಪುಟ್ಟೇಗೌಡ, ಶಾಸಕರಾದ ಎಂ.ಪಿ.ಕುಮಾರಸ್ವಾಮಿ, ಸಿ.ಟಿ.ರವಿ, ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಎಂ.ಕೆ.ಪ್ರಾಣೇಶ್ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.