ADVERTISEMENT

ತಾತ ಮಾಡಿದ ಬ್ಯಾಂಕ್ ಸಾಲ ತೀರಿಸಲಾಗದೆ ಯುವಕ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2011, 19:20 IST
Last Updated 2 ಫೆಬ್ರುವರಿ 2011, 19:20 IST

ಗುಬ್ಬಿ:  ತನ್ನ ತಾತ ಮಾಡಿದ ಬ್ಯಾಂಕ್ ಸಾಲ ತೀರಿಸಲಾಗದೆ ಮನನೊಂದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಬುಧವಾರ ತಾಲ್ಲೂಕಿನ ಜಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

ಜಿ.ಹೊಸಹಳ್ಳಿ ಗ್ರಾಮದ ಹನುಮಂತಪ್ಪ ಪುತ್ರ ಬಸವರಾಜು (26) ಸಾವಿಗೀಡಾದ ಯುವಕ. ಆತನ ತಾತ ಹುಚ್ಚಪ್ಪ 10 ವರ್ಷಗಳ ಹಿಂದೆ ಬ್ಯಾಂಕ್‌ನಲ್ಲಿ ಮಾಡಿದ್ದ ಸಾಲ ತೀರುವಳಿ ಆಗದ ಕಾರಣ ಜಪ್ತಿ ನೋಟಿಸ್ ಬಂದ ಹಿನ್ನೆಲೆಯಲ್ಲಿ ಮನ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.