ADVERTISEMENT

ತಿಮ್ಮಕ್ಕ ಪುತ್ರನಿಂದ ದೂರು

​ಪ್ರಜಾವಾಣಿ ವಾರ್ತೆ
Published 26 ಮೇ 2018, 19:30 IST
Last Updated 26 ಮೇ 2018, 19:30 IST

ಬೆಂಗಳೂರು: ‘ಸಾಲುಮರದ ತಿಮ್ಮಕ್ಕ ಅವರ ಸಾವಿನ ಬಗ್ಗೆ ಸುಳ್ಳು ವದಂತಿ ಹಬ್ಬಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಿ’ ಎಂದು ಅವರ ಸಾಕು ಮಗ ಉಮೇಶ್, ನಗರದ ಸೈಬರ್‌ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.

ನಗರ ಕಮಿಷನರ್ ಟಿ.ಸುನೀಲ್‌ ಕುಮಾರ್‌ ಅವರನ್ನು ಭೇಟಿ ಮಾಡಿದ ಉಮೇಶ್, ತಪ್ಪಿತಸ್ಥರನ್ನು ತ್ವರಿತವಾಗಿ ಬಂಧಿಸುವಂತೆ ಒತ್ತಾಯಿಸಿದರು. ಕಮಿಷನರ್‌ ಅವರ ಸಲಹೆಯಂತೆ ಠಾಣೆಗೆ ಹೋಗಿ ದೂರು ಸಲ್ಲಿಸಿದರು.

‘ತಿಮ್ಮಕ್ಕ ಅವರು ಆರೋಗ್ಯವಾಗಿದ್ದಾರೆ. ಸುಳ್ಳು ಸುದ್ದಿಯಿಂದಾಗಿ ಅವರಿಗೆ ಹಾಗೂ ಅಭಿಮಾನಿಗಳಿಗೆ ನೋವಾಗಿದೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.