ಸುವರ್ಣಸೌಧ (ಬೆಳಗಾವಿ): ಮಾಜಿ ಸಚಿವ ಆರ್.ಬಿ.ತಿಮ್ಮಾಪುರ ಅವರ ವಿರುದ್ಧ ಬಿಜೆಪಿಯ ಗೋವಿಂದ ಕಾರಜೋಳ ವಿಧಾನಸಭೆಯಲ್ಲಿ ಗುರುವಾರ ಹಕ್ಕುಚ್ಯುತಿ ಮಂಡಿಸಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮುಧೋಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ತಿಮ್ಮಾಪುರ ಅವರನ್ನು ಕಾರಜೋಳ ಪರಾಭವಗೊಳಿಸಿದ್ದರು.
ಮುಧೋಳದ ಶಾಸಕರಾದ ತಾವು ಅಧಿವೇಶನದಲ್ಲಿ ಭಾಗಿಯಾಗಿರುವಾಗ ಮುಧೋಳ ಪುರಸಭೆಯ ಸುಮಾರು ₨ ೩ ಕೋಟಿ ಮೊತ್ತದ ಯೋಜನೆಗಳ ಕಾಮಗಾರಿಗೆ ತಿಮ್ಮಾಪುರ ಅವರು ಗುದ್ದಲಿಪೂಜೆ ಮಾಡಿದ್ದಾರೆ. ಇದರಿಂದ ತಮ್ಮ ಹಕ್ಕಿಗೆ ಚ್ಯುತಿಯಾಗಿದ್ದು ಈ ವಿಷಯವನ್ನು ಹಕ್ಕುಬಾಧ್ಯತಾ ಸಮಿತಿ ಗೆ ಒಪ್ಪಿಸಬೇಕು ಎಂದು ಕಾರಜೋಳ ಮನವಿ ಮಾಡಿಕೊಂಡರು. ಇದಕ್ಕೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಒಪ್ಪಿಗೆ ಸೂಚಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.