ಬೆಂಗಳೂರು: ಪ್ರೊ.ತೇಜಸ್ವಿ ಕಟ್ಟೀಮನಿ ಸಾಹಿತ್ಯ ಪುರಸ್ಕಾರಕ್ಕೆ ಪ್ರಸಕ್ತ ಸಾಲಿನಲ್ಲಿ 2 ಪುಸ್ತಕಗಳು ಆಯ್ಕೆಯಾಗಿವೆ.
ಡಾ. ಬಸು ಬೇವಿನಗಿಡ ಅವರ `ಬಾಳೆ ಕಂಬ~ ಮತ್ತು ಡಾ. ಮರಿಗುದ್ದಿಯವರ `ನೆತ್ತಿಯ ಗುರಿ ಅಂತರಿಕ್ಷ~ ಕೃತಿ ಈ ಬಾರಿಯ ಪುರಸ್ಕಾರಕ್ಕೆ ಆಯ್ಕೆ ಆಗಿವೆ ಎಂದು ಪ್ರೊ.ತೇಜಸ್ವಿ ಕಟ್ಟೀಮನಿ ಟ್ರಸ್ಟ್ ಪ್ರಕಟಣೆ ತಿಳಿಸಿದೆ.
ಪುರಸ್ಕಾರವು ಹತ್ತು ಸಾವಿರ ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆ ಒಳಗೊಂಡಿದೆ. ಇದೇ 18 ರಂದು ಬಾಗಲಕೋಟೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.