ADVERTISEMENT

ದಕ್ಷಿಣ ಒಳನಾಡಿನಲ್ಲಿ ಮುಂಗಾರು ಕ್ಷೀಣ

​ಪ್ರಜಾವಾಣಿ ವಾರ್ತೆ
Published 11 ಜುಲೈ 2012, 19:30 IST
Last Updated 11 ಜುಲೈ 2012, 19:30 IST

ಬೆಂಗಳೂರು: ಬುಧವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಮತ್ತು ಒಳನಾಡಿನಲ್ಲಿ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಮುಂಗಾರು ಕ್ಷೀಣಿಸಿದೆ.

ಅಂಕೋಲಾದಲ್ಲಿ ಅತಿ ಹೆಚ್ಚು 13 ಸೆಂ.ಮೀ ಮಳೆಯಾಗಿದೆ. ಗೋಕರ್ಣ 12, ಶಿರಾಲಿ, ಕುಮಟಾ 8, ಭಟ್ಕಳ 7, ಉಡುಪಿ, ಕುಂದಾಪುರ, ಮಂಕಿ 6, ಪಣಂಬೂರು, ಮಂಗಳೂರು ವಿಮಾನ ನಿಲ್ದಾಣ, ಕೊಲ್ಲೂರು 5, ಉಪ್ಪಿನಂಗಡಿ, ಸಿದ್ದಾಪುರ, ಕದ್ರಾ, ಹೊನ್ನಾವರ 4, ನೀಲ್ಕುಂದ, ಕಾರವಾರ, ಬಾದಾಮಿ, ಆಗುಂಬೆ 3, ಮಂಗಳೂರು, ಮಾಣಿ, ಸುಬ್ರಹ್ಮಣ್ಯ, ಮೂಡಬಿದಿರೆ, ಬಂಟ್ವಾಳ, ಕೋಟ, ಕಾರ್ಕಳ, ಸುರಪುರ, ಬೆಳವಾಡಿ, ಪೊನ್ನಂಪೇಟೆ, ಮೊಳಕಾಲ್ಮೂರು, ಹೊಸನಗರ 2, ಬೆಳ್ತಂಗಡಿ, ಧರ್ಮಸ್ಥಳ, ಪುತ್ತೂರು, ಸುಳ್ಯ, ಯಲ್ಲಾಪುರ,

ಮೂಲ್ಕಿ, ಶಿರಸಿ, ಲೊಂಡ, ಕಿತ್ತೂರು, ಹನುಮಸಾಗರ, ಮಾಹಾಲಿಂಗಪುರ, ಭಾಗಮಂಡಲ, ವಿರಾಜಪೇಟೆ, ಲಿಂಗನಮಕ್ಕಿ, ತಾಳಗುಪ್ಪ, ಕೊಟ್ಟಿಗೆಹಾರ, ಕಮ್ಮರಡಿ, ಶೃಂಗೇರಿ, ಬರಗೂರಿನಲ್ಲಿ 1 ಸೆಂ ಮೀ ಮಳೆಯಾಗಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದ ಕರಾವಳಿ ಸೇರಿದಂತೆ ದಕ್ಷಿಣ ಮತ್ತು ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಪಶ್ಚಿಮಾಭಿಮುಖವಾಗಿ 45 ರಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.