ಮಂಗಳೂರು: ಇಲ್ಲಿನ ಕಲ್ಲಡ್ಕದಲ್ಲಿ ಯುವಕನೊಬ್ಬನಿಗೆ ಚೂರಿಯಿಂದ ಇರಿದ ಘಟನೆ ಮಂಗಳವಾರ ಸಂಜೆ ನಡೆದಿದೆ. ಘಟನೆ ಖಂಡಿಸಿ ಒಂದು ಗುಂಪು ಕಲ್ಲು ತೂರಾಟ ನಡೆಸಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಪರಿಸ್ಥಿತಿ ನಿಯಂತ್ರಿಸಲು ಹೋದ ಪೊಲೀಸರ ಮೇಲೂ ಕಲ್ಲು ತೂರಲಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆ ಸಬ್ ಇನ್ಸ್ಪೆಕ್ಟರ್ ರಕ್ಷಿತ್ ಅವರ ತಲೆಗೆ ಕಲ್ಲೇಟು ಬಿದ್ದಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.