ADVERTISEMENT

ದಲಿತರ ಮನ ಗೆಲ್ಲಿ: ಬಿಎಸ್‌ವೈ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2018, 20:18 IST
Last Updated 11 ಏಪ್ರಿಲ್ 2018, 20:18 IST

ಬೆಂಗಳೂರು: ವಿಧಾನಸಭಾ ಕ್ಷೇತ್ರಗಳಲ್ಲಿ ದಲಿತರ, ಹಿಂದುಳಿದ ವರ್ಗಗಳ ಮತದಾರರ ಕಡೆಗೆ ಹೆಚ್ಚಿನ ಗಮನ ನೀಡಬೇಕು. ಮಹಿಳಾ ಸಂಘಟನೆ ಬಲಪಡಿಸಬೇಕು. ಇಲ್ಲದಿದ್ದರೆ ನಿರೀಕ್ಷಿತ ಫಲಿತಾಂಶ ಕಷ್ಟವಾಗಬಹುದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಬುಧವಾರ ನಡೆದ ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಭ್ರಷ್ಟ ಕಾಂಗ್ರೆಸ್‌ ಸರ್ಕಾರ ಕಿತ್ತೊಗೆಯಲು ಜನರು ತೀರ್ಮಾನ ಮಾಡಿದ್ದಾರೆ. ನಾವು ಪರಿಶ್ರಮ ಹಾಕಿದರೆ ಮಿಷನ್‌ 150 ಗುರಿಯನ್ನು ತಲುಪಬಹುದು. ಉತ್ತರ ಪ್ರದೇಶ ಮಾದರಿಯ ಫಲಿತಾಂಶ ಇಲ್ಲಿಯೂ ಬರಲಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.