ADVERTISEMENT

ದಲಿತ ವ್ಯಕ್ತಿ ಕೊಲೆ; ಶವ ಇಟ್ಟು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 14 ಮೇ 2018, 19:30 IST
Last Updated 14 ಮೇ 2018, 19:30 IST
ನಂದಪ್ಪ ಭೀಮಪ್ಪ ದೊಡಮನಿ ಕೊಲೆ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಕೆಂಭಾವಿ ಪೊಲೀಸ್ ಠಾಣೆ ಎದುರು ಭಾನುವಾರ ಅಗತೀರ್ಥ ಗ್ರಾಮಸ್ಥರು ಶವ ಇಟ್ಟು ಪ್ರತಿಭಟನೆ ನಡೆಸಿದರು
ನಂದಪ್ಪ ಭೀಮಪ್ಪ ದೊಡಮನಿ ಕೊಲೆ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಕೆಂಭಾವಿ ಪೊಲೀಸ್ ಠಾಣೆ ಎದುರು ಭಾನುವಾರ ಅಗತೀರ್ಥ ಗ್ರಾಮಸ್ಥರು ಶವ ಇಟ್ಟು ಪ್ರತಿಭಟನೆ ನಡೆಸಿದರು   

ಕೆಂಭಾವಿ (ಯಾದಗಿರಿ ಜಿಲ್ಲೆ): ಸಮೀಪದ ಅಗತೀರ್ಥ ಗ್ರಾಮದಲ್ಲಿ ದಲಿತ ವ್ಯಕ್ತಿ ನಂದಪ್ಪ ಭೀಮಪ್ಪ ದೊಡಮನಿ (48) ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಮಾಜಿ ಸಚಿವ ರಾಜುಗೌಡ ನೇತೃತ್ವದಲ್ಲಿ ಸಂಬಂಧಿಕರು ಭಾನುವಾರ ಇಲ್ಲಿಯ ಪೊಲೀಸ್‌ ಠಾಣೆ ಎದುರು ಶವವಿಟ್ಟು ಪ್ರತಿಭಟನೆ ನಡೆಸಿದರು.

‘ನಂದಪ್ಪ ಅವರ ಮಗ ಮಲ್ಲಪ್ಪನಿಗೆ ಕೆಲ ದಿನಗಳ ಹಿಂದೆ ನಾನಾಗೌಡ ಪಾಟೀಲ ಎಂಬುವವರಟ್ರ್ಯಾಕ್ಟರ್‌ ಡಿಕ್ಕಿ ಹೊಡೆದು ಗಂಭೀರ ಗಾಯಗಳಾಗಿದ್ದವು. ಗ್ರಾಮದಲ್ಲಿ ನ್ಯಾಯ ಪಂಚಾಯಿತಿ ನಡೆಸಿ, ಮಲ್ಲಪ್ಪನ ಚಿಕಿತ್ಸೆಗಾಗಿ ಹಣ ನೀಡುವ ಭರವಸೆ ನೀಡಲಾಗಿತ್ತು. ಅದರಂತೆ ನಂದಪ್ಪ ಅವರು ಹಣ ಕೇಳಲು ಶನಿವಾರ ಸಂಜೆ ಹೋದಾಗ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ’ ಎಂದು ಸಂಬಂಧಿಕರು ಆರೋಪಿಸಿದರು.

ADVERTISEMENT

‘ನಂದಪ್ಪ ಸಾವಿನಿಂದ ಅವರ ಕುಟುಂಬ ಬೀದಿಗೆ ಬಿದ್ದಿದೆ. ಕೂಡಲೇ ಮೃತರ ಕುಟುಂಬಕ್ಕೆ ಪರಿಹಾರ ಒದಗಿಸಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.