ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ಜೋಳದಾಳ್ ಅರಣ್ಯ ಪ್ರದೇಶದಲ್ಲಿ 16 ವರ್ಷದ ಬಾಲಕಿ ಮೇಲೆ ಇಬ್ಬರು ಯುವಕರು ಅತ್ಯಾಚಾರ ನಡೆಸಿದ್ದಾರೆ.
ಭದ್ರಾವತಿ ತಾಲ್ಲೂಕಿನ ರಂಗನಾಥಪುರದ ರಮೇಶ್ ಹಾಗೂ ಅರುಣ್ ಅತ್ಯಾಚಾರ ನಡೆಸಿದ ಆರೋಪಿಗಳು.
ಜೋಳದಾಳ್ ಸಮೀಪದ ಅಮ್ಮನಗುಡ್ಡ ದೇವಸ್ಥಾನಕ್ಕೆ ಆರೋಪಿಗಳು ಬಾಲಕಿ ಜತೆ ಬಂದಿದ್ದರು. ಈ ಸಂದರ್ಭ ರಮೇಶ್ ಮದುವೆಯಾಗುವುದಾಗಿ ನಂಬಿಸಿ ಬಾಲಕಿ ಜತೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಈ ದೃಶ್ಯವನ್ನು ಜತೆಗಿದ್ದ ಸ್ನೇಹಿತ ಅರುಣ್ ಮೊಬೈಲ್ ನಲ್ಲಿ ವಿಡಿಯೋ ಮಾಡಿದ್ದಾನೆ. ಬಳಿಕ ಬಾಲಕಿಗೆ ವಿಡಿಯೋ ತೋರಿಸಿ ಬಹಿರಂಗ ಮಾಡುವ ಬೆದರಿಕೆ ಹಾಕಿ ಅತ್ಯಾಚಾರ ಎಸಗಿದ್ದಾರೆ.
ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ರಮೇಶನನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ನಾಪತ್ತೆಯಾಗಿದ್ದಾನೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.