ADVERTISEMENT

ದುಷ್ಕರ್ಮಿಗಳ ಗುಂಡಿಗೆ ಆರ್. ಎನ್ ನಾಯಕ ಬಲಿ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2013, 13:06 IST
Last Updated 21 ಡಿಸೆಂಬರ್ 2013, 13:06 IST

ಅಂಕೋಲಾ : ಸಹಕಾರಿ ಧುರೀಣ ಆರ್. ಎನ್ ನಾಯಕ ಅವರನ್ನು ಮೂವರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.

ದ್ವಾರಕಾ ಸೌಹಾರ್ದ ಸಹಕಾರಿ ಸಂಘದ ಸಂಸ್ಥಾಪಕ ಮತ್ತು ಅಧ್ಯಕ್ಷ ಆರ್. ಎನ್. ನಾಯಕ ಅವರು ಮಧ್ಯಾಹ್ನ ತಮ್ಮ ಕಚೇರಿಯಿಂದ ಕಾರಿನಲ್ಲಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.  ದುಷ್ಕರ್ಮಿಗಳಲ್ಲಿ ಒಬ್ಬ ಗುಂಡಿನ ದಾಳಿ ನಡೆಸಿದ್ದು, ಗುಂಡೇಟು ತಗಲಿದ ನಾಯಕ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅವರ ಅಂಗರಕ್ಷಕ ರಮೇಶ್‌ಗೌಡ ಪ್ರತಿದಾಳಿ ನಡೆಸಿದಾಗ ಒಬ್ಬ ದುಷ್ಕರ್ಮಿ ಸಾವನ್ನಪ್ಪಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಸಾರ್ವಜನಿಕರು ಒಬ್ಬನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಇನ್ನೊಬ್ಬ ಪರಾರಿಯಾಗಿದ್ದಾನೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.