ADVERTISEMENT

ದೇವಸ್ಥಾನಕ್ಕೆ ನಿತ್ಯಾನಂದ ಭೇಟಿ: ಮಾತಿನ ಚಕಮಕಿ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2018, 7:17 IST
Last Updated 5 ಮಾರ್ಚ್ 2018, 7:17 IST
ದೇವಸ್ಥಾನಕ್ಕೆ ನಿತ್ಯಾನಂದ ಭೇಟಿ: ಮಾತಿನ ಚಕಮಕಿ
ದೇವಸ್ಥಾನಕ್ಕೆ ನಿತ್ಯಾನಂದ ಭೇಟಿ: ಮಾತಿನ ಚಕಮಕಿ   

ರಾಮನಗರ: ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಇರುವ ಪಂಚಮುಖಿ ಆಂಜನೇಯ ದೇವಸ್ಥಾನಕ್ಕೆ ಸೋಮವಾರ ಬೆಳಿಗ್ಗೆ ನಿತ್ಯಾನಂದ ಸ್ವಾಮೀಜಿ ಭೇಟಿ ನೀಡಿ ಪೂಜೆ ಸಲ್ಲಿಸಿದರು.‌

ದೇವಸ್ಥಾನದ ಉದ್ಘಾಟನೆ ಕಾರ್ಯಕ್ರಮದ ಚಿತ್ರೀಕರಣಕ್ಕೆ ಮಾಧ್ಯಮದವರಿಗೆ ನಿತ್ಯಾನಂದನ ಶಿಷ್ಯರು ಅಡ್ಡಿಪಡಿಸಿದ ಘಟನೆಯೂ ನಡೆಯಿತು. ಈ ಸಂದರ್ಭ ಮಾತಿನ‌ ಚಕಮಕಿ ನಡೆಯಿತು. ಪೂಜೆ ಸಲ್ಲಿಸಿದ ಬಳಿಕ ಹಿಂಭಾಗದಿಂದ ನಿತ್ಯಾನಂದ ನಿರ್ಗಮಿಸಿದರು.‌

ಬೆಳಿಗ್ಗೆ 10ರ ಸುಮಾರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲೆಂದು ರಾಮನಗರಕ್ಕೆ ಬಂದಿದ್ದ ನಿತ್ಯಾನಂದ ಮಾಧ್ಯಮದವರು ಸ್ಥಳದಲ್ಲಿ ಇರುವ ಸುದ್ದಿ ತಿಳಿದು ದೂರದಲ್ಲಿಯೇ ಉಳಿದಿದ್ದರು.‌ ಕಡೆಗೆ 11 ಗಂಟೆ ಸುಮಾರಿಗೆ ದೇವಸ್ಥಾನಕ್ಕೆ ಬಂದ ಅವರು ಸುಮಾರು ಹತ್ತು‌ ನಿಮಿಷ ಕಾಲ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.