ಅಫಜಲಪುರ (ಕಲಬುರ್ಗಿ ಜಿಲ್ಲೆ): ಅಫಜಲಪುರ ಕ್ಷೇತ್ರದ ಕಾಂಗ್ರೆಸ್ನ ಹಿರಿಯ ಶಾಸಕ ಮಾಲೀಕಯ್ಯ ಗುತ್ತೇದಾರ ಅವರು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರಿಗೆ ಸ್ವಾಗತ ಕೋರಿ ಫ್ಲೆಕ್ಸ್ ಹಾಕಿಸಿ ಅಚ್ಚರಿ ಮೂಡಿಸಿದರು.
ಬುಧವಾರ ಪಟ್ಟಣದಲ್ಲಿ ಆಯೋಜಿಸಿದ್ದ ‘ವಿಕಾಸ ಪರ್ವ’ ದಲ್ಲಿ ಭಾಗವಹಿಸಲು ದೇವೇಗೌಡ ಅವರು ಹೆಲಿಕಾಪ್ಟರ್ ಮೂಲಕ ಬಂದರು. ಶಾಸಕರು ಹೆಲಿಪ್ಯಾಡ್, ಪ್ರಮುಖ ವೃತ್ತ ಮತ್ತು ರಸ್ತೆಗಳಲ್ಲಿ ಫ್ಲೆಕ್ಸ್ ಹಾಕಿಸಿದ್ದರು. ಇದರಿಂದಾಗಿ ಜನ ಅಲ್ಲಲ್ಲಿ ಗುಂಪು ಸೇರಿ, ಈ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚಿಸಿದರು.
‘ಇದರಲ್ಲಿ ಯಾವುದೇ ರಾಜಕೀಯ ಇಲ್ಲ. ಹಿರಿಯರಾದ ದೇವೇಗೌಡರು ಅಧಿಕಾರದಲ್ಲಿದ್ದಾಗ ಭೀಮಾ ಏತ ನೀರಾವರಿ ಯೋಜನೆಗೆ ಅನುದಾನ ನೀಡಿದ್ದರು. ಅದಕ್ಕಾಗಿ ಅವರಿಗೆ ಹಾರ್ದಿಕ ಸ್ವಾಗತ ಕೋರಿದ್ದೇನೆ’ ಎಂದು ಮಾಲೀಕಯ್ಯ ಪ್ರತಿಕ್ರಿಯಿಸಿದರು.
ದೇವೇಗೌಡರು ತಮ್ಮ ಭಾಷಣದಲ್ಲಿ ಈ ವಿಷಯ ಪ್ರಸ್ತಾಪಿಸಲಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.