ADVERTISEMENT

ದೇಶಕ್ಕಾಗಿ ಭವಿಷ್ಯದಲ್ಲಿ ಒಗ್ಗಟ್ಟಾಗಿರಲಿದ್ದೇವೆ: ಮಮತಾ ಬ್ಯಾನರ್ಜಿ

ನಗರದಲ್ಲಿ ವಿವಿಧ ರಾಜ್ಯಗಳ ಸಿಎಂಗಳು

​ಪ್ರಜಾವಾಣಿ ವಾರ್ತೆ
Published 23 ಮೇ 2018, 10:01 IST
Last Updated 23 ಮೇ 2018, 10:01 IST
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಆಂದ್ರ ಪ್ರದೇಶದ ಪ್ರಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಸಿಪಿಐ(ಎಂ)ನ ಸೀತಾರಾಮ ಯಚೂರಿ ಬೆಂಗಳೂರಿಗೆ ಬಂದಿದ್ದು, ಮಾತುಕತೆ ನಡೆಸಿದರು. –ಎಎನ್‌ಐ ಚಿತ್ರ
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಆಂದ್ರ ಪ್ರದೇಶದ ಪ್ರಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಸಿಪಿಐ(ಎಂ)ನ ಸೀತಾರಾಮ ಯಚೂರಿ ಬೆಂಗಳೂರಿಗೆ ಬಂದಿದ್ದು, ಮಾತುಕತೆ ನಡೆಸಿದರು. –ಎಎನ್‌ಐ ಚಿತ್ರ   

ಬೆಂಗಳೂರು: ದೇಶದ ಭವಿಷ್ಯದ ಹಿತದೃಷ್ಟಿಯಿಂದ ಭವಿಷ್ಯದಲ್ಲಿ ಒಗ್ಗಟ್ಟಾಗಿರಲಿದ್ದೇವೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದರು.

ಕಾಂಗ್ರೆಸ್–ಜೆಡಿಎಸ್‌ ಮೈತ್ರಿ ಸರ್ಕಾರದ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸುವ ಸಲುವಾಗಿ ನಗರಕ್ಕೆ ಆಗಮಿಸಿದ ಅವರು ಸುದ್ದಿಗಾರರ ಜತೆ ಮಾತನಾಡಿ, ಭವಿಷ್ಯದಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಲು ಮತ್ತು ಪ್ರಾದೇಶಿಕ ಪಕ್ಷಗಳ ಶಕ್ತಿ ಹೆಚ್ಚಿಸುವ ಸಲುವಾಗಿ ಇಲ್ಲಿಗೆ ಬಂದಿದ್ದೇವೆ’ ಎಂದರು.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಸಿಪಿಐ(ಎಂ)ನ ಸೀತಾರಾಮ ಯೆಚೂರಿ ಸಹ ನಗರಕ್ಕೆ ಬಂದಿದ್ದು, ಮಾತುಕತೆ ನಡೆಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.