ADVERTISEMENT

ದೋಣಿ ಮುಳುಗಿ ಮೀನುಗಾರ ನಾಪತ್ತೆ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2016, 5:18 IST
Last Updated 4 ಆಗಸ್ಟ್ 2016, 5:18 IST
ದೋಣಿ ಮುಳುಗಿ ಮೀನುಗಾರ ನಾಪತ್ತೆ
ದೋಣಿ ಮುಳುಗಿ ಮೀನುಗಾರ ನಾಪತ್ತೆ   

ಕಾರವಾರ: ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಿ ಮಂಜುನಾಥ್ ಬಾಬು ಕಾರ್ವಿ (35) ಎಂಬ ಮೀನುಗಾರ ನಾಪತ್ತೆಯಾಗಿರುವ ಘಟನೆ ಅರಬ್ಬಿ ಸಮುದ್ರದಲ್ಲಿ ನಡೆದಿದೆ.

ಮಂಜುನಾಥ್‌ ಅವರು ಏಳು ಮಂದಿ ಮೀನುಗಾರರೊಂದಿಗೆ ಭಟ್ಕಳ ಬಂದರಿನಿಂದ ಮೀನುಗಾರಿಕೆಗೆ ಹೋಗಿದ್ದರು. ದೋಣಿ ಮುಳುಗಿದ ಬಳಿಕ ಮೀನುಗಾರರನ್ನು ಸ್ಥಳೀಯರು ರಕ್ಷಿಸಿದ್ದು, ಅವರನ್ನು ಭಟ್ಕಳದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಜುನಾಥ್ ಅವರ ಪತ್ತೆಗೆ ಶೋಧ ನಡೆಸಲಾಗುತ್ತಿದೆ. ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.