ADVERTISEMENT

ಧರ್ಮ ಒಡೆದವರಿಗೆ ಚುನಾವಣೆಯಲ್ಲಿ ತಕ್ಕ ಪಾಠ: ರಂಭಾಪುರಿ ಶ್ರೀ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2018, 9:22 IST
Last Updated 10 ಮಾರ್ಚ್ 2018, 9:22 IST
ರಂಭಾಪುರಿ ಶ್ರೀ   (ಸಂಗ್ರಹ ಚಿತ್ರ)
ರಂಭಾಪುರಿ ಶ್ರೀ (ಸಂಗ್ರಹ ಚಿತ್ರ)   

ಕಲಬುರ್ಗಿ:  ‘ಲಿಂಗಾಯತ–ವೀರಶೈವ ಧರ್ಮ ಒಡೆದವರಿಗೆ ಚುನಾವಣೆಯಲ್ಲಿ ತಕ್ಕಪಾಠ ಕಲಿಸಬೇಕು’ ಎಂದು  ರಂಭಾಪುರಿ ಶ್ರೀ ಹೇಳಿದರು.

‘ಧರ್ಮ ಬೇರ್ಪಡಿಸಿದರೆ ನಾವು ನ್ಯಾಯಾಲಯದ ಮೆಟ್ಟಿಲು ಹತ್ತುತ್ತೇವೆ. ಚುನಾವಣೆ ಹೊತ್ತಲ್ಲಿ ಲಿಂಗಾಯತ –ವೀರಶೈವ ಧರ್ಮವನ್ನು ಬೇರ್ಪಡಿಸಿದರೆ ಕಾಂಗ್ರೆಸ್ ಪಕ್ಷಕ್ಕೆ ಹಾನಿ ಆಗುವುದು ಖಚಿತ’ ಎಂದು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.

‘ಇದುವರೆಗೆ ಯಾವ ಮುಖ್ಯಮಂತ್ರಿಯೂ  ಧರ್ಮದ ವಿಚಾರದಲ್ಲಿ ತಲೆ ಹಾಕಿಲ್ಲ. ಆದರೆ ಸಿದ್ದರಾಮಯ್ಯ ಈ ವಿಚಾರದಲ್ಲಿ ಮೂಗು ತೂರಿಸೋದು ಸರಿಯಲ್ಲ’ ಎಂದು ಹೇಳಿದರು.

ADVERTISEMENT

‘ತಜ್ಞರ ಸಮಿತಿಯು ವರದಿಯನ್ನು ಸಲ್ಲಿಸಲು ಆರು ತಿಂಗಳ ಸಮಯವಾಕಾಶ ಕೋರಿತ್ತು. ಆದರೆ ಸಮಿತಿ ಮೇಲೆ ಮುಖ್ಯಮಂತ್ರಿ ಮತ್ತು ಸಚಿವರು ಸೇರಿ ಒತ್ತಡ ಹೇರಿ, ತರಾತುರಿಯಲ್ಲಿ ವರದಿ ಸಲ್ಲಿಕೆ ಮಾಡಿಸಿಕೊಂಡಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಬಹುಸಂಖ್ಯಾತ ಲಿಂಗಾಯತರನ್ನು ಅಲ್ಪಸಂಖ್ಯಾತರ ಗುಂಪಿಗೆ ಸೇರಿಸುವ ಕ್ರಮ ಸರಿಯಲ್ಲ. ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರದಲ್ಲಿ ಸಿಎಂ ಇಕ್ಕಟ್ಟಿಗೆ ಸಿಲುಕಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.