ADVERTISEMENT

ಧಾರವಾಡದಲ್ಲಿ ಕರ್ನಾಟಕ ಬಂದ್‍ಗೆ ಬೆಂಬಲ

​ಪ್ರಜಾವಾಣಿ ವಾರ್ತೆ
Published 28 ಮೇ 2018, 4:05 IST
Last Updated 28 ಮೇ 2018, 4:05 IST
ಧಾರವಾಡದಲ್ಲಿ ಕರ್ನಾಟಕ ಬಂದ್‍ಗೆ ಬೆಂಬಲ
ಧಾರವಾಡದಲ್ಲಿ ಕರ್ನಾಟಕ ಬಂದ್‍ಗೆ ಬೆಂಬಲ   

ಧಾರವಾಡ: ರೈತರ ಸಾಲ ಮನ್ನಾಕ್ಕೆ ಆಗ್ರಹಿಸಿ ಬಿಜೆಪಿ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಧಾರವಾಡ ನಗರದಲ್ಲಿ ಬೆಂಬಲ ವ್ಯಕ್ತವಾಗಿದೆ.

ನಗರ ಹಾಗೂ ಗ್ರಾಮೀಣ ಪ್ರದೇಶದ ಸಾರಿಗೆ ಬಸ್ ಸಂಚಾರ ಸ್ಥಗಿತಗೊಂಡಿದೆ. ಬಸ್‍ಗಳು ಡಿಪೊ ಸೇರಿದ್ದು ಸಂಚಾರ ವ್ಯವಸ್ಥೆ ಇಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ. 


ನಗರದ ಜ್ಯುಬಲಿ ವೃತ್ತದಲ್ಲಿ ಜಮಾಯಿಸಿರುವ ಬಿಜೆಪಿ ಪಕ್ಷದ ಕಾರ್ಯಕರ್ತರು, ರಾಜ್ಯ ಸರಕಾರದ ವಿರುದ್ದ ಘೋಷಣೆ ಕೂಗಿದ್ದಾರೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಆಗಿಲ್ಲ, ಹಾಗಾಗಿ ಬಸ್‍ಗಾಗಿ ವಿದ್ಯಾರ್ಥಿಗಳು ಕಾದು ನಿಂತಿದ್ದರು. ಆನಂತರ  ವಿದ್ಯಾರ್ಥಿಗಳು ಆಟೊಗಳಲ್ಲಿ ಕಾಲೇಜಿಗೆ ತೆರೆಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.