ADVERTISEMENT

ನಮ್ಮ ಪಕ್ಷದ ಮೂವರು ಅಭ್ಯರ್ಥಿಗಳು ಗೆಲ್ಲುವುದು ಖಚಿತ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2018, 8:42 IST
Last Updated 23 ಮಾರ್ಚ್ 2018, 8:42 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಶುಕ್ರವಾರ ನಡೆಯುತ್ತಿರುವ ಚುನಾವಣೆಯಲ್ಲಿ ನಮ್ಮ ಪಕ್ಷ ದ ಮೂವರು ಅಭ್ಯರ್ಥಿಗಳು ಗೆಲ್ಲುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. 

‘ಚುನಾವಣೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಸೋಲಿನ ಹತಾಶೆಯಿಂದ ಜೆಡಿಎಸ್ ಆಕ್ರಮ ನಡೆದಿದೆ ಎಂದು ಸುಳ್ಳು ಆರೋಪ ಮಾಡುತ್ತಿದೆ. ಎರಡನೇ ಮತಪತ್ರ ಪಡೆಯಲು ಅವಕಾಶ ಇದೆ’ ಎಂದು ತಿಳಿಸಿದರು. 

ಕಾಂಗ್ರೆಸ್ ಅಭ್ಯರ್ಥಿ ಮೊದಲ ಪ್ರಾಶಸ್ತ್ಯದ ಮತ ಎಲ್.ಹನುಮಂತಯ್ಯ, ಎರಡನೇ ಪ್ರಾಶಸ್ತ್ಯದ ಮತವನ್ನು ಜಿ.ಸಿ.ಚಂದ್ರಶೇಖರ್ ಅವರಿಗೆ ಮತ ಹಾಕಿರುವುದಾಗಿ ಅವರು ಹೇಳಿದರು. 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.