ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಮೇಲೆ ನಗರದ ಫರ್ಜಿ ಕೆಫೆಯಲ್ಲಿ ಮೊಹಮದ್ ನಲಪಾಡ್ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ನಲಪಾಡ್ ಸಲ್ಲಿಸಿದ್ದ ಜಾಮೀನು ಅರ್ಜಿ ಮೇಲಿನ ತೀರ್ಪನ್ನು ಹೈಕೋರ್ಟ್ ಗುರುವಾರಕ್ಕೆ (ಜೂ.14) ಕಾಯ್ದಿರಿಸಿದೆ.
ಈ ಕುರಿತಂತೆ ಮೊಹಮದ್ ನಲಪಾಡ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ಆದೇಶದ ಉಕ್ತಲೇಖನವನ್ನು ನಾಳೆ (ಜೂ.14) ನ್ಯಾಯಾಲಯದ ತೆರೆದ ಕಲಾಪದಲ್ಲಿಯೇ ನೀಡುವುದಾಗಿ ನ್ಯಾಯಪೀಠ ತಿಳಿಸಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.