ಮೈಸೂರು: ಇಲ್ಲಿಗೆ ಸಮೀಪದ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಾಲಯದಲ್ಲಿ 45 ವರ್ಷ ಅರ್ಚಕರಾಗಿ ಸೇವೆ ಸಲ್ಲಿಸಿದ್ದ ಎನ್. ನಾಗೇಂದ್ರ ದೀಕ್ಷಿತ್ (78) ಸೋಮವಾರ ಬೆಳಗಿನ ಜಾವ ಮೃತಪಟ್ಟರು.
ಶೀತಜ್ವರದಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಅಂತ್ಯಕ್ರಿಯೆ ಚಾಮುಂಡಿ ಬೆಟ್ಟದ ದೇವಿಕೆರೆ ಸಮೀಪದ ಸ್ಮಶಾನದಲ್ಲಿ ಸೋಮವಾರ ಸಂಜೆ ನೆರೆವೇರಿತು. ನಾಲ್ಕು ದಶಕಕ್ಕೂ ಹೆಚ್ಚು ಕಾಲ ಅರ್ಚಕ ಸೇವೆ ಮಾಡಿದ್ದ ನಾಗೇಂದ್ರ ದೀಕ್ಷಿತ್, 2006ರಲ್ಲಿ ಸ್ವಯಂ ನಿವೃತ್ತಿ ಪಡೆದಿದ್ದರು. ದೀಕ್ಷಿತ್ ಅವರಿಗೆ ಪತ್ನಿ ಸರೋಜಮ್ಮ, ಪುತ್ರರಾದ ಶಶಿಶೇಖರ್ ದೀಕ್ಷಿತ್, ಶ್ರೀಧರ್ ದೀಕ್ಷಿತ್ ಇದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.