ADVERTISEMENT

ನಾಚಿಕೆ ಆಗಲ್ವೇನ್ರಿ, ಥೂ ನಿಮಗೆ: ಸಾರಿಗೆ ಅಧಿಕಾರಿ ಮೇಲೆ ಸಚಿವ ರೇವಣ್ಣ ಗರಂ

​ಪ್ರಜಾವಾಣಿ ವಾರ್ತೆ
Published 17 ಜೂನ್ 2018, 7:39 IST
Last Updated 17 ಜೂನ್ 2018, 7:39 IST
ಲೋಕೋಪಯೋಗಿ ಇಲಾಖೆ ಸಚಿವ ಎಚ್.ಡಿ.ರೇವಣ್ಣ
ಲೋಕೋಪಯೋಗಿ ಇಲಾಖೆ ಸಚಿವ ಎಚ್.ಡಿ.ರೇವಣ್ಣ   

ಧಾರವಾಡ: ಲೋಕೋಪಯೋಗಿ ಇಲಾಖೆ ಸಚಿವ ಎಚ್.ಡಿ.ರೇವಣ್ಣ ಇಲ್ಲಿನ ಜಿಲ್ಲಾ ಪಂಚಾಯಿತಿ ಭವನದಲ್ಲಿ ನಡೆಯುತ್ತಿರುವ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹುಬ್ಬಳ್ಳಿ–ಧಾರವಾಡ ನಗರ ಸಾರಿಗೆ(ಬಿಆರ್‌ಟಿಎಸ್‌) ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಬಿಆರ್‌ಟಿಎಸ್‌ ಕಾರ್ಯಾನಿರ್ವಾಹಕ ನಿರ್ದೇಶಕ ಹಿರೇಮಠ ಸಭೆಗೆ ಗೈರಾಗಿದ್ದರು. ಇದರಿಂದ ಕುಪಿತಗೊಂಡ ಸಚಿವರು, ‘ಅವನ್ಯಾರ್ರಿ ಎಂ.ಡಿ, ಏನ್ ಕೆಲಸಾ ಮಾಡುತ್ತಿದ್ದಾನೆ. ನಾಚಿಕೆ ಆಗಲ್ವೇನ್ರಿ ನಿಮಗೆ, ಥು ನಿಮಗೆ’ ಎಂದು ಏಕವಚನದಲ್ಲಿ ತರಾಟೆಗೆ ತೆಗೆದುಕೊಂಡರು. ಸೇರಿದ್ದ ಅಧಿಕಾರಿಗಳು ಸಚಿವರ ಈ ವರ್ತನೆಯಿಂದ ಕಕ್ಕಾಬಿಕ್ಕಿಯಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT