ADVERTISEMENT

ನಾಲ್ವರು ಕೆಎಸ್‌ಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ಆದೇಶ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2011, 19:35 IST
Last Updated 7 ಅಕ್ಟೋಬರ್ 2011, 19:35 IST

ಬೆಂಗಳೂರು: ರಾಜ್ಯ ಸರ್ಕಾರ ನಾಲ್ಕು ಮಂದಿ ಕೆಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ಶುಕ್ರವಾರ ಆದೇಶ ಹೊರಡಿಸಿದ್ದು, ಅವರನ್ನು ಹಾಲಿ ಇರುವ ಸ್ಥಾನಗಳಲ್ಲಿಯೇ ಮುಂದುವರಿಸಲಾಗಿದೆ.

ಕೆಎಎಸ್ ಆಯ್ಕೆ ಶ್ರೇಣಿ ಅಧಿಕಾರಿಯಾದ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯ       ನಿರ್ವಹಣಾಧಿಕಾರಿ ಎನ್.ಜಯರಾಂ ಅವರಿಗೆ ಸೂಪರ್ ಟೈಂ ಸ್ಕೇಲ್‌ಗೆ ಬಡ್ತಿ ನೀಡಲಾಗಿದೆ.

ಕೆಎಎಸ್ ಹಿರಿಯ ಶ್ರೇಣಿ ಅಧಿಕಾರಿಗಳಾದ ಮೈಸೂರಿನ  ಹೆಚ್ಚುವರಿ ಜಿಲ್ಲಾಧಿಕಾರಿ ನಾಗಾ   ನಾಯಕ್, ವಿಜಾಪುರದ ಹೆಚ್ಚುವರಿ ಜಿಲ್ಲಾಧಿಕಾರಿ ಜಿ.ಎನ್.ಜಿದ್ದಿಮನಿ, ಮಂಡ್ಯದ ಮೈಸೂರು ಸಕ್ಕರೆ ಕಾರ್ಖಾನೆಯ ಮುಖ್ಯ ಆಡಳಿತಾಧಿಕಾರಿ ಕೆ.ಎನ್.ನಿಂಗಪ್ಪ ಅವರಿಗೆ ಆಯ್ಕೆಶ್ರೇಣಿಗೆ ಬಡ್ತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.