ADVERTISEMENT

ನಿಜಲಿಂಗಪ್ಪ ಕರ್ನಾಟಕದ ಮೊದಲ ಸಿ.ಎಂ: ಪಾಪು

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2018, 19:30 IST
Last Updated 21 ಮಾರ್ಚ್ 2018, 19:30 IST

ಧಾರವಾಡ: ‘ರಾಜ್ಯ ಸರ್ಕಾರವು ತಮಗೆ ಬಸವ ರಾಷ್ಟ್ರೀಯ ಪುರಸ್ಕಾರ ನೀಡುವುದಕ್ಕೂ ಮುನ್ನವೇ, ಎಸ್.ನಿಜಲಿಂಗಪ್ಪ ಅವರು ಕರ್ನಾಟಕದ ಮೊಟ್ಟ ಮೊದಲ ಮುಖ್ಯಮಂತ್ರಿ ಎಂದು ತನ್ನ ದಾಖಲೆಗಳಲ್ಲಿ ತಿದ್ದಿಕೊಳ್ಳಬೇಕು. ಇಲ್ಲದಿದ್ದಲ್ಲಿ, ಪ್ರಶಸ್ತಿ ಸ್ವೀಕರಿಸುವ ಬಗ್ಗೆ ವಿಚಾರ ಮಾಡಬೇಕಾಗುತ್ತದೆ’ ಎಂದು ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪ ಹೇಳಿದರು.

‘ಕೆ.ಸಿ. ರೆಡ್ಡಿ, ಕೆಂಗಲ್‌ ಹನುಮಂತಯ್ಯ, ಕಡಿದಾಳು ಮಂಜಪ್ಪ ಅವರು ಮೈಸೂರು ರಾಜ್ಯದ ಮುಖ್ಯಮಂತ್ರಿಗಳಾಗಿ ಕಾರ್ಯನಿರ್ವಹಿಸಿದ್ದಾರೆಯೇ ಹೊರತು, ಕರ್ನಾಟಕದ ಮುಖ್ಯಮಂತ್ರಿಗಳಾಗಿ ಅಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT