ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದ್ದು ಸೋಮವಾರವೂ ಶಾಲಾ- ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಶನಿವಾರ ಸಹ ರಜೆ ನೀಡಲಾಗಿತ್ತು.
ಬೆಳಗಾವಿ: ಜಿಲ್ಲೆಯ ಬಹುತೇಕ ಕಡೆ ಭಾನುವಾರ ದಿನವಿಡೀ ಬಿರುಸಾಗಿ ಮಳೆಯಾಗಿದೆ. ನಿರಂತರವಾಗಿ ಚಳಿ, ಗಾಳಿ ಬೀಸುತ್ತಿತ್ತು. ರಸ್ತೆಗಳಲ್ಲಿ ಜನರ ಸಂಚಾರ ವಿರಳವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು.
ಚಿಕ್ಕೋಡಿ, ಹಿರೇಬಾಗೇವಾಡಿ, ಬೈಲಹೊಂಗಲ, ಗೋಕಾಕ, ಘಟಪ್ರಭಾ, ರಾಮದುರ್ಗ, ಸವದತ್ತಿ, ಖಾನಾಪುರ ಹಾಗೂ ನಿಪ್ಪಾಣಿಯಲ್ಲಿಯೂ ಉತ್ತಮವಾಗಿ ಮಳೆಯಾಗಿದೆ.
ಹೊಸಪೇಟೆ, ಕಲಬುರ್ಗಿಯಲ್ಲಿ ಬಿರುಸಿನ ಮಳೆಯಾಗಿರುವುದಾಗಿ ವರದಿಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.