ADVERTISEMENT

ನೀತಿ ಸಂಹಿತೆ ಉಲ್ಲಂಘನೆ: ಕಾಂಗ್ರೆಸ್ ಮುಖಂಡ ಆನಂದ್ ಸಿಂಗ್ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2018, 16:21 IST
Last Updated 30 ಮಾರ್ಚ್ 2018, 16:21 IST
ಆನಂದ್ ಸಿಂಗ್ (ಸಂಗ್ರಹ ಚಿತ್ರ)
ಆನಂದ್ ಸಿಂಗ್ (ಸಂಗ್ರಹ ಚಿತ್ರ)   

ಹೊಸಪೇಟೆ: ಇಲ್ಲಿನ ಅನಂತಶಯನಗುಡಿ ಬಸ್ ತಂಗುದಾಣದಲ್ಲಿ ಕಾಂಗ್ರೆಸ್ ಮುಖಂಡ ಆನಂದ್ ಸಿಂಗ್ ಅವರ ಭಾವಚಿತ್ರದ ಫ್ಲೆಕ್ಸ್ ಹಾಕಿ ನೀತಿ ಸಂಹಿತೆ ಉಲ್ಲಂಘಿಸಿದಕ್ಕಾಗಿ  ಅವರ ವಿರುದ್ಧ ಶುಕ್ರವಾರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಲೂಕಿನ ಕಲ್ಲಹಳ್ಳಿಯಲ್ಲಿ ಕಾಂಗ್ರೆಸ್‌ ಮುಖಂಡ ಎಸ್. ಭೀಮಾನಾಯ್ಕ ಅವರ ಭಾವಚಿತ್ರದ ಫ್ಲೆಕ್ಸ್ ಅಳವಡಿಸಿದ್ದರಿಂದ ಅವರ ವಿರುದ್ಧವೂ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚುನಾವಣೆ ನೀತಿಸಂಹಿತೆಯ ಸಂಚಾರಿ ದಳದ ಅಧಿಕಾರಿ ಶಾಂತಕುಮಾರ ದೂರು ಸಲ್ಲಿಸಿದ್ದು, ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.