ADVERTISEMENT

ನೀನಾಸಂ: ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2014, 19:30 IST
Last Updated 7 ಮಾರ್ಚ್ 2014, 19:30 IST

ಬೆಂಗಳೂರು : ಕಳೆದ ಎರಡೂವರೆ ದಶಕಗಳಿಂದ ರಂಗತರಬೇತಿ ನಡೆಸುತ್ತಿ­ರುವ ಹೆಗ್ಗೋಡಿನ ನೀನಾಸಂ ರಂಗ­ಶಿಕ್ಷಣ ಕೇಂದ್ರವು ಮೇ ೧೧ರಿಂದ ೩೧ರವರೆಗೆ ಮೂರು ವಾರಗಳ ರಂಗ ತರಬೇತಿ ಶಿಬಿರ ನಡೆಸುತ್ತಿದ್ದು, ಆಸಕ್ತ­ರಿಂದ ಅರ್ಜಿಗಳನ್ನು ಆಹ್ವಾನಿಸಿದೆ.

೧೮ ರಿಂದ ೩೫ ವರ್ಷದ ಒಳಗಿನ ಎಸ್.ಎಸ್.ಎಲ್.ಸಿ. ವರೆಗೆ ಓದಿದ­ವರು ಶಿಬಿರದಲ್ಲಿ ಪಾಲ್ಗೊಳ್ಳಬಹುದು. ಶಿಬಿರ­ದಲ್ಲಿ ರಂಗಶಿಕ್ಷಣ ಕೇಂದ್ರದ ಅಧ್ಯಾಪಕರು ತರಬೇತಿ ನಡೆಸಿಕೊಡ­ಲಿದ್ದು, ರಂಗಮಾಧ್ಯಮದ ಬಗ್ಗೆ ಮಾಹಿತಿ­ಗಳನ್ನು ನೀಡುವ ಜತೆಗೆ ಶಿಬಿರಾರ್ಥಿಗಳಿಗೆ ನುರಿತ ನಿರ್ದೇಶಕ­ರಿಂದ ರಂಗನಾಟಕ ಪ್ರಯೋಗಗಳನ್ನೂ ಮಾಡಿಸಲಾಗುತ್ತದೆ. ಅಭ್ಯರ್ಥಿಗಳಿಗೆ ಅಭಿನಯ ವ್ಯಾಯಾಮಕ್ಕೆ ಅಗತ್ಯವಾದ ದೇಹದಾರ್ಢ್ಯತೆ ಇರುವುದು ಅಗತ್ಯ.

ಆಸಕ್ತರು ಏಪ್ರಿಲ್ 20ರೊಳಗೆ ಅರ್ಜಿ ಸಲ್ಲಿಸಬಹುದು. ಅಂತರ್ಜಾಲ ತಾಣ www.ninasam.org ದಲ್ಲಿ ಕೂಡಾ ಅರ್ಜಿ ಸಲ್ಲಿಸಬಹುದು. ಸಂಪರ್ಕ ವಿಳಾಸ: ಸಂಚಾಲಕರು, ನೀನಾಸಂ ರಂಗಶಿಕ್ಷಣ  ಕೇಂದ್ರ, ಹೆಗ್ಗೋಡು, ಸಾಗರ, ಶಿವಮೊಗ್ಗ ಜಿಲ್ಲೆ– ೫೭೭ ೪೧೭. ದೂರವಾಣಿ ಸಂಖ್ಯೆ ೦೮೧೮೩ – ೨೬೫೬೪೬. ಮೊಬೈಲ್ : ಸಿ.ಆರ್. ವಿಶ್ವನಾಥ ಭಟ್ – ೭೭೬೦೮ -೦೯೭೦೦.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.