ಬೆಂಗಳೂರು: ಕಾನೂನಿನ ಎದುರು ಸಂಘರ್ಷಕ್ಕೆ ಒಳಗಾದ ಮಕ್ಕಳ (ಬಾಲಾಪರಾಧಿಗಳ) ಸ್ಥಿತಿಗತಿಯನ್ನು ತಿಳಿಯ ಬಯಸಿರುವ ಹೈಕೋರ್ಟ್, ಈ ಸಂಬಂಧ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ನೀನಾ ನಾಯಕ್ ಅವರ ಖುದ್ದು ಹಾಜರಿಗೆ ಸೋಮವಾರ ನಿರ್ದೇಶಿಸಿದೆ.
ಇಂತಹ ಮಕ್ಕಳು ಅನುಭವಿಸುತ್ತಿರುವ ಹಿಂಸೆಗೆ ಸಂಬಂಧಿಸಿದಂತೆ ಪತ್ರಿಕೆಗಳಲ್ಲಿ ಬಂದಿರುವ ವರದಿಯ ಆಧಾರದ ಮೇಲೆ ಕೋರ್ಟ್ ಖುದ್ದಾಗಿ ದೂರು ದಾಖಲು ಮಾಡಿಕೊಂಡು ನಡೆಸುತ್ತಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಇದಾಗಿದೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ಕೋರ್ಟ್ಗೆ ಸಹಾಯ ಮಾಡಲು ವಕೀಲೆ ಸುಮನಾ ಬಾಳಿಗ ಅವರನ್ನು ಮುಖ್ಯ ನ್ಯಾಯಮೂರ್ತಿಗಳು ನೇಮಕ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.