ಹಾಸನ: ‘ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದೆ. ಸರ್ಕಾರ ಹೇಮಾವತಿ ಜಲಾಶಯದ ಅಚ್ಚುಕಟ್ಟು ನಾಲೆಗಳಿಗೆ ನೀರು ಬಿಡಬೇಕು’ ಎಂದು ಶಾಸಕ ಎಚ್.ಡಿ.ರೇವಣ್ಣ ಒತ್ತಾಯಿಸಿದರು.
ಸುದ್ದಿಗಾರರೊಂದಿಗೆ ಮಾತನಾಡುತ್ತ, ‘ಸರ್ಕಾರಕ್ಕೆ ಮಾರ್ಚ್ 5ರವರೆಗೆ ಗಡುವು ನೀಡುತ್ತೇವೆ. ನೀರು ಬೀಡದಿದ್ದರೆ, ನಾವೇ ಅಣೆಕಟ್ಟಿನ ಗೇಟ್ಗಳಿಂದ ನೀರು ಬಿಡುತ್ತೇವೆ. ನಮ್ಮ ಮೇಲೆ ಗೋಲಿಬಾರ್ ಮಾಡಿ, ಬಂಧಿಸಿದರು ಹೆದರಲ್ಲ’ ಎಂದು ರೇವಣ್ಣ ಎಚ್ಚರಿಸಿದರು.
‘ಜನ ಜಾನುವಾರಗಳಿಗೆ ನೀರಿನ ಸಮಸ್ಯೆ ಇದೆ. ಹಾಗಾಗಿ, ಒಂದು ವಾರದೊಳಗೆ ನಾಲೆಗಳಿಗೆ ನೀರು ಹರಿಸಬೇಕು. ಇಲ್ಲದಿದ್ದರೆ ಸಾವಿರಾರು ಜನ ಅಣೆಕಟ್ಟಿಗೆ ಮುತ್ತಿಗೆ ಹಾಕುತ್ತೇವೆ’ ಎಂದರು.
‘ಇವರು ರೈತರ ಅನ್ನ ಕಿತ್ತುಕೊಂಡಿದ್ದಾರೆ. ಕನಿಷ್ಟ ಕುಡಿಯುವ ನೀರಾದರೂ ಕೊಡಲಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗರಂ ಆದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.