ADVERTISEMENT

ನೇಮಕ

​ಪ್ರಜಾವಾಣಿ ವಾರ್ತೆ
Published 15 ಜೂನ್ 2012, 19:30 IST
Last Updated 15 ಜೂನ್ 2012, 19:30 IST

ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿಯೂ ಆದ ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿ ಸುಭಾಷ್‌ಚಂದ್ರ ಕುಂಠಿಯಾ ಅವರನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಹಣಕಾಸು ಸಲಹೆಗಾರರನ್ನಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತ ಪತ್ರವನ್ನು ಕೇಂದ್ರ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ರಾಜ್ಯಕ್ಕೆ ಕಳುಹಿಸಿದೆ. ಯಾವುದೇ ಸಂದರ್ಭದಲ್ಲಿ ಅವರು ಕೇಂದ್ರ ಸೇವೆಗೆ ತೆರಳುವ ಸಾಧ್ಯತೆ ಇದೆ. ಅವರನ್ನು ರಾಜ್ಯ ಸೇವೆಯಿಂದ ಬಿಡುಗಡೆಗೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.