ಬೆಂಗಳೂರು (ಪಿಟಿಐ): ಕರ್ನಾಟಕದ ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಶಿವರಾಜ ಪಾಟೀಲ್ ಅವರ ಮನೆಗೆ ಶುಕ್ರವಾರ ರಾತ್ರಿ ನುಗ್ಗಿದ ಕಳ್ಳರು ಮೂರು ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿ ವಿಗ್ರಹಗಳು ಮತ್ತು ಪೂಜಾ ಸಾಮಗ್ರಿಯನ್ನು ಅಪಹರಿಸಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಕಳ್ಳರು ಕಾಂಪೌಂಡ್ ಗೋಡೆಯನ್ನು ಏರಿ ಹಿಂಬದಿಯ ಬಾಗಿಲು ಮುರಿದು ಮನೆಯೊಳಕ್ಕೆ ನುಗ್ಗಿದ್ದಾರೆ. ಬೆಳ್ಳಿ ವಿಗ್ರಹಗಳು ಮತ್ತು ಕೆಲವು ಪೂಜಾ ಸಾಮಗ್ರಿಗಳನ್ನು ಬಿಟ್ಟು ಬೇರೆ ಏನನ್ನೂ ಕಳವು ಮಾಡಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಘಟನೆ ನಡೆದಾಗ ಕುಟುಂಬದ ಸದಸ್ಯರೆಲ್ಲರೂ ಗಾಢ ನಿದ್ದೆಯಲ್ಲಿದ್ದರು ಎಂದೂ ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.