ಬೆಂಗಳೂರು: ಬಹು ದಿನಗಳಿಂದ ಸ್ಥಗಿತವಾಗಿದ್ದ ಐತಿಹಾಸಿಕ ಪತ್ರಿಕೆ ಹಾಗೂ ಕಾಂಗ್ರೆಸ್ನ ಮುಖವಾಣಿ ‘ನ್ಯಾಷನಲ್ ಹೆರಾಲ್ಡ್’ ಪತ್ರಿಕೆಯನ್ನು ಕಾಂಗ್ರೆಸ್ನ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸೋಮವಾರ ಇಲ್ಲಿ ಮರು ಬಿಡುಗಡೆ ಮಾಡಿದರು.
ನಗರದಲ್ಲಿ ಪತ್ರಿಕೆಗೆ ಮರು ಚಾಲನೆ ನೀಡಿದ ಬಳಿಕ ಮಾತನಾಡಿದ ರಾಹುಲ್ ಗಾಂಧಿ ಅವರು, ರಾಜಕೀಯ ಕಾರಣಗಳಿಂದ ಪತ್ರಿಕೆ ಪ್ರಕಟಣೆ ನಿಂತಿತ್ತು. ಈಗ ಪುನರ್ ಆರಂಭವಾಗಿದೆ. ಕೇಂದ್ರ ಸರ್ಕಾರ ಸತ್ಯದ ಪರ ನಿಲ್ಲುವವರನ್ನು ಅಧಿಕಾರಯುತವಾಗಿ ತುಳಿಯುತ್ತಿದೆ. ನ್ಯಾಷನಲ್ ಹೆರಾಲ್ಡ್ ಹೆಚ್ಚು ಶಕ್ತಿಯುತವಾಗಿದ್ದು, ಪತ್ರಿಕೆಯ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.