ADVERTISEMENT

ನ.23ರಿಂದ ಆಳ್ವಾಸ್ ಚಿತ್ರಸಿರಿ: ಕಲಾವಿದರಿಗೆ ಆಹ್ವಾನ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2017, 19:30 IST
Last Updated 3 ಅಕ್ಟೋಬರ್ 2017, 19:30 IST

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ನಾಡಿನ ಶ್ರೇಷ್ಠ ಕಲಾವಿದರನ್ನು ಒಗ್ಗೂಡಿಸುವ ಸಲುವಾಗಿ ಪ್ರತಿ ವರ್ಷ ರಾಜ್ಯ ಮಟ್ಟದ ಚಿತ್ರಕಲಾ ಶಿಬಿರವನ್ನು ಆಯೋಜಿಸುತ್ತಾ ಬಂದಿದ್ದು, ಈ ವರ್ಷವೂ ನವಂಬರ್ 23ರಿಂದ26ರವರೆಗೆ ಆಯೋಜಿಸಲು ನಿರ್ಣಯಿಸಲಾಗಿದೆ.

'ಆಳ್ವಾಸ್ ಚಿತ್ರಸಿರಿ 2017' ಎಂಬ ಹೆಸರಿನಲ್ಲಿ ನಡೆಯಲಿರುವ ಈ ರಾಜ್ಯಮಟ್ಟದ ಚಿತ್ರಕಲಾ ಶಿಬಿರದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಸುಮಾರು 25 ರಿಂದ30 ಹಿರಿಯ, ಕಿರಿಯ ಸಮಕಾಲೀನ ಕಲಾವಿದರು ಭಾಗವಹಿಸಲಿದ್ದಾರೆ. ಇಲ್ಲಿ ಮೂರ್ತಗೊಳ್ಳುವ ಕಲಾಕೃತಿಗಳನ್ನು ನ. 31 ರಿಂದ ಡಿಸೆಂಬರ್ 3ರ ತನಕ ಆಳ್ವಾಸ್ ನುಡಿಸಿರಿಯ ಸಭಾಂಗಣದಲ್ಲಿ ಪ್ರದರ್ಶನಕ್ಕೆ ಇಡಲಾಗುವುದು.

ಆಸಕ್ತ ಚಿತ್ರಕಲಾವಿದರು ತಮ್ಮ ಇತ್ತೀಚಿನ 2-3 ಕಲಾಕೃತಿಗಳ ಭಾವಚಿತ್ರಗಳ ಜೊತೆಗೆ ಸ್ವವಿವರಗಳನ್ನು ಅಧ್ಯಕ್ಷರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡುಬಿದಿರೆ-574227 ಈ ವಿಳಾಸಕ್ಕೆ ಇದೇ 15ರೊಳಗೆ ಕಳುಹಿಸಲು ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.