
ಪ್ರಜಾವಾಣಿ ವಾರ್ತೆಹಾಸನ: ‘ಪಕ್ಷ ಬದಲಿಸುವ ಜಾಯಮಾನ ನನ್ನದಲ್ಲ, ಜೀವ ಇರುವವರೆಗೂ ನಾನು ಜೆಡಿಎಸ್ನಲ್ಲೇ ಇರುತ್ತೇನೆ’ ಎಂದು ಶಾಸಕ ಎಚ್.ಡಿ. ರೇವಣ್ಣ ಸ್ಪಷ್ಟಪಡಿಸಿದ್ದಾರೆ.
‘ರೇವಣ್ಣ ಕಾಂಗ್ರೆಸ್ ಪಕ್ಷ ಸೇರಲು ಕಸರತ್ತು ನಡೆಸಿದ್ದಾರೆ’ ಎಂದು ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ. ಮಂಜು ಬುಧವಾರ ಮಾಡಿದ್ದ ಆರೋಪಕ್ಕೆ ರೇವಣ್ಣ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದರು.
‘ಕಾಂಗ್ರೆಸ್ ಮುಳುಗುತ್ತಿರುವ ಹಡಗು. ನಾನೇಕೆ ಆ ಪಕ್ಷವನ್ನು ಸೇರಲಿ? ಈ ಲೋಕಸಭಾ ಚುನಾವಣೆಯ ಬಳಿಕ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳುತ್ತದೆ. ಆಗ ಯಾರು ಯಾವ ಪಕ್ಷಕ್ಕೆ ಹೋಗಲಿದ್ದಾರೆ ಎಂಬುದು ಗೊತ್ತಾಗಲಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.