
ಪ್ರಜಾವಾಣಿ ವಾರ್ತೆಕೃಷ್ಣರಾಜಪೇಟೆ: ಬೇರೊಬ್ಬರ ಹೆಸರಿನಲ್ಲಿ ದ್ವಿತೀಯ ಪಿಯು ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿಯೊಬ್ಬ ಪರೀಕ್ಷಾ ಜಾಗೃತ ದಳದವರ ಕೈಗೆ ಸಿಕ್ಕಿಬಿದ್ದ ಘಟನೆ ಪಟ್ಟಣದ ಎಸ್.ಎಂ. ಲಿಂಗಪ್ಪ ಶಿಕ್ಷಣ ವಿದ್ಯಾಲಯದ ಪರೀಕ್ಷಾ ಕೇಂದ್ರದಲ್ಲಿ ಬುಧವಾರ ನಡೆದಿದೆ. ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದ ಆಸಿಫ್ (19) ಸಿಕ್ಕಿಬಿದ್ದ ವ್ಯಕ್ತಿ.
ಆಲಂಬಾಡಿ ಗ್ರಾಮದ ಸೋಮಶೇಖರ್ ಎಂಬುವವನ ಬದಲಾಗಿ ಆಸಿಫ್ ಬುಧವಾರ ರಾಜ್ಯಶಾಸ್ತ್ರ ಪತ್ರಿಕೆಯ ಪರೀಕ್ಷೆ ಬರೆಯುತ್ತಿದ್ದ.
ಜಾಗೃತ ದಳದ ಅಧಿಕಾರಿಗಳ ತಂಡವು ಪ್ರವೇಶ ಪತ್ರದಲ್ಲಿನ ಅಭ್ಯರ್ಥಿಯ ಭಾವಚಿತ್ರವನ್ನು ಪರಿಶೀಲನೆ ಮಾಡುವ ಸಂದರ್ಭದಲ್ಲಿ ನಕಲಿ ಅಭ್ಯರ್ಥಿಯನ್ನು ಪತ್ತೆ ಹಚ್ಚಿದರು. ಆಸಿಫ್ನನ್ನು ಪೋಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.