ADVERTISEMENT

ಪುಸ್ತಕ ಬಹುಮಾನಕ್ಕೆ ಸಾಹಿತ್ಯ ಅಕಾಡೆಮಿಯಿಂದ ಕೃತಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 16 ಜೂನ್ 2013, 19:59 IST
Last Updated 16 ಜೂನ್ 2013, 19:59 IST

ಬೆಂಗಳೂರು:  ಕರ್ನಾಟಕ ಸಾಹಿತ್ಯ ಅಕಾಡೆಮಿಯು 2012ನೇ ಸಾಲಿನ ಪುಸ್ತಕ ಬಹುಮಾನಕ್ಕಾಗಿ ವಿವಿಧ ಪ್ರಕಾರಗಳ ಕೃತಿಗಳನ್ನು ಆಹ್ವಾನಿಸಿದೆ.

ಕಾವ್ಯ (ವಚನಗಳು ಮತ್ತು ಹನಿಗವನಗಳು), ಕಾದಂಬರಿ, ಸಣ್ಣಕತೆ, ನಾಟಕ, ಲಲಿತ ಪ್ರಬಂಧ, ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ, ಆತ್ಮಕತೆ (ಸಿಂಪಿ ಲಿಂಗಣ್ಣ ದತ್ತಿನಿಧಿ ಬಹುಮಾನ), ಸಾಹಿತ್ಯ ವಿಮರ್ಶೆ, ಗ್ರಂಥ ಸಂಪಾದನೆ (ಪ್ರಾಚೀನ ಕೃತಿಗಳ ಸಂಪಾದನೆ), ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ, ಮಾನವಿಕ ವಿಷಯಗಳು, ಸಂಶೋಧನೆ, ಅನುವಾದ ಹಾಗೂ ಸಂಕೀರ್ಣ ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುವುದು.

ಕೃತಿಗಳು 2012 ರ ಜನವರಿ 1 ರಿಂದ ಡಿಸೆಂಬರ್ 31 ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರಬೇಕು. ಜನಪದ ಪ್ರಕಾರ ಹಾಗೂ ಪಿಎಚ್.ಡಿ ಪದವಿಗಾಗಿ ಸಿದ್ಧಪಡಿಸಿದ ಸಂಶೋಧನಾ ಗ್ರಂಥಗಳನ್ನು ಪ್ರಶಸ್ತಿಗೆ ಪರಿಗಣಿಸುವುದಿಲ್ಲ ಎಂದು ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಿದೆ.

ಪುಸ್ತಕಗಳನ್ನು ಕಳಿಸಲು ಜುಲೈ 15 ಕೊನೆಯ ದಿನ. ಪುಸ್ತಕದ ಒಂದು ಪ್ರತಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2 ನೇ ಮಹಡಿ, ಜೆ.ಸಿ.ರಸ್ತೆ ಇಲ್ಲಿಗೆ ಕಳುಹಿಸಬೇಕು.

ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ : www.karnatakasahityaacademy.org

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.