ADVERTISEMENT

ಪೆಲಿಕಾನ್‌ ಬೇಟೆ: ಚಿತ್ರ ವೈರಲ್‌

​ಪ್ರಜಾವಾಣಿ ವಾರ್ತೆ
Published 17 ಜೂನ್ 2018, 16:23 IST
Last Updated 17 ಜೂನ್ 2018, 16:23 IST
ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿ ಮೃತಪಟ್ಟ ಪೆಲಿಕಾನ್‌ ಎಳೆದೊಯ್ಯುತ್ತಿರುವುದು.
ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿ ಮೃತಪಟ್ಟ ಪೆಲಿಕಾನ್‌ ಎಳೆದೊಯ್ಯುತ್ತಿರುವುದು.   

ಮಳವಳ್ಳಿ: ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿ ವ್ಯಕ್ತಿಯೊಬ್ಬ ಭಾನುವಾರ ಪೆಲಿಕಾನ್‌ಗೆ ಕಲ್ಲಿನಿಂದ ಹೊಡೆದು ಕೊಂದಿದ್ದಾನೆ. ಪಕ್ಷಿಯ ಮೃತದೇಹವನ್ನು ಎಳೆದೊಯ್ಯುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಕಿರುಗಾವಲು ಗ್ರಾಮದ ಕುಮಾರ್‌ ಪಕ್ಷಿಯನ್ನು ಕೊಂದ ಆರೋಪಿ. ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರ ವೈರಲ್‌ ಆಗುತ್ತಿದ್ದಂತೆ ಅರಣ್ಯಾಧಿಕಾರಿಗಳು ಕುಮಾರ್‌ನನ್ನು ಬಂಧಿಸಿದ್ದಾರೆ.

‘ಸಾಯುತ್ತಿದ್ದ ಪಕ್ಷಿಯನ್ನು ಎತ್ತಿಕೊಂಡು ಹೋಗುತ್ತಿದ್ದೆ, ಹೊಡೆದು ಸಾಯಿಸಿಲ್ಲ ಎಂದು ಆರೋಪಿ ತಿಳಿಸಿದ್ದಾನೆ. ಸೋಮವಾರ ಪಕ್ಷಿಯ ಮರಣೋತ್ತರ ಪರೀಕ್ಷೆ ನಡೆಸಿ ಸಾವಿನ ಕಾರಣ ತಿಳಿಯಲಾಗುವುದು’ ಎಂದು ಆರ್‌ಎಫ್‌ಒ ರಮೇಶ್‌ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.