ADVERTISEMENT

ಪೊಲೀಸರಿಂದ ಕುರ್ ಆನ್ ಎಸೆದು ಅವಮಾನ: ಮುಸ್ಲಿಂ ಸಂಘಟನೆಗಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2017, 11:11 IST
Last Updated 13 ಅಕ್ಟೋಬರ್ 2017, 11:11 IST
ಪೊಲೀಸರಿಂದ  ಕುರ್ ಆನ್ ಎಸೆದು ಅವಮಾನ:  ಮುಸ್ಲಿಂ ಸಂಘಟನೆಗಳ ಪ್ರತಿಭಟನೆ
ಪೊಲೀಸರಿಂದ ಕುರ್ ಆನ್ ಎಸೆದು ಅವಮಾನ: ಮುಸ್ಲಿಂ ಸಂಘಟನೆಗಳ ಪ್ರತಿಭಟನೆ   

ಮಂಗಳೂರು: ಬಂಟ್ವಾಳ ತಾಲ್ಲೂಕಿನ ಸಜೀಪ ಮುನ್ನೂರಿನ ಖಲಂದರ್ ಎಂಬಾತನ ಮನೆಯಲ್ಲಿ ಶೋಧ ಕಾರ್ಯದ ವೇಳೆ ಪೊಲೀಸರು ಇಸ್ಲಾಂ ಧರ್ಮದ ಪವಿತ್ರ ಗ್ರಂಥ ಕುರ್ ಆನ್ ಎಸೆದು ಅವಮಾನ ಮಾಡಿದ್ದಾರೆ ಎಂದು ಮುಸ್ಲಿಂ ಸಂಘಟನೆಗಳು ಆರೋಪಿಸಿವೆ.

ಆ ಪೊಲೀಸರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಮ್ ಸಂಘಟನೆಗಳ ಒಕ್ಕೂಟದಿಂದ ಮಂಗಳೂರಿನ ನೆಹರೂ ಮೈದಾನದಲ್ಲಿ ಬೃಹತ್  ಪ್ರತಿಭಟನೆ ನಡೆಸಲಾಯಿತು.

ಒಕ್ಕೂಟದ ಸಂಚಾಲಕ ಕೆ.ಅಶ್ರಫ್ ಪ್ರಾಸ್ತಾವಿಕ ಭಾಷಣ ಮಾಡಿ 'ಕುರ್ ಆನ್ ಅವಮಾನಿಸಿದ ಪೊಲೀಸರಿಗೆ ಶಿಕ್ಷೆಯಾಗುವವರೆಗೂ ಹೋರಾಟ ಮುಂದುವರಿಸುತ್ತೇವೆ' ಎಂದರು. 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.